LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News Districts

ನೀಟ್ ನಲ್ಲಿ 150ನೇ ರ್ಯಾಂಕ್ : ಎನ್. ಸಾಯಿ ಶ್ರಾವ್ಯಗೆ ಬಿಡಿಸಿಸಿಐನಿಂದ ಅಭಿನಂದನೆ

ಬಳ್ಳಾರಿ : ನೀಟ್ (UG)-2026 ಪರೀಕ್ಷೆಯಲ್ಲಿ 150ನೇ ್ಯಾಂಕ್ ಗಳಿಸಿರುವ ಬಳ್ಳಾರಿಯ ವಿದ್ಯಾರ್ಥಿನಿ ಎನ್. ಸಾಯಿ ಶ್ರಾವ್ಯ ಅವರನ್ನು ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯು ಶುಕ್ರವಾರ ಸನ್ಮಾನಿಸಿ ಅಭಿನಂದಿಸಿದೆ.

 

ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯು ಅಧ್ಯಕ್ಷರಾದ ಅವ್ವಾರು ಮಂಜುನಾಥ್ ಹಾಗೂ ಗೌರವ ಕಾರ್ಯದರ್ಶಿಗಳಾದ  ಕೆ. ಸಿ. ಸುರೇಶಬಾಬು ಅವರು, ಎನ್. ಸಾಯಿ ಶ್ರಾವ್ಯ ಅವರಿಗೆ ಅಭಿನಂದನೆ ಸಲ್ಲಿಸಿ, ವೈದ್ಯಕೀಯ ಶಿಕ್ಷಣದಲ್ಲಿ ಉತ್ತಮ ಸಾಧನೆಮಾಡಿ, ಜನಸೇವೆಗೆ ಅರ್ಪಣೆಗೊಳ್ಳಬೇಕು ಎಂದು ಹಾರೈಸಿದರು.

 

ಅಭಿನಂದನೆಗಳನ್ನು ಸ್ವೀಕರಿಸಿ ಮಾತನಾಡಿದ ಎನ್.‌ ಸಾಯಿ ಶ್ರಾವ್ಯ ಅವರು, ಬಿಡಿಸಿಸಿಐನಲ್ಲಿ ಅಭಿನಂದನೆಗಳನ್ನು ಸ್ವೀಕರಿಸುತ್ತಿರುವುದಕ್ಕೆ ಖುಷಿಯಾಗುತ್ತಿದೆ. ಹೆಮ್ಮೆ ಅನಿಸುತ್ತಿದೆ. ವೈದ್ಯಕೀಯ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡುವ ವಿಶ್ವಾಸವಿದೆ ಎಂದು ಹೇಳಿದರು.

 

ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಹಿರಿಯ ಉಪಾಧ್ಯಕ್ಷರಾದ ಎಸ್. ದೊಡ್ಡನಗೌಡ, ಉಪಾಧ್ಯಕ್ಷರಾದ  ಪಿ. ಪಾಲಣ್ಣ, ಜಂಟಿ ಕಾರ್ಯದರ್ಶಿಗಳಾದ ವಿ. ರಾಮಚಂದ್ರ, ಖಜಾಂಚಿಗಳಾದ ಸಿ.ಎಸ್. ಸತ್ಯನಾರಾಯಣ, ಮಾಜಿ ಅಧ್ಯಕ್ಷರಾದ ಬಿ. ಮಹಾರುದ್ರ ಗೌಡ, ಸಿ. ಶ್ರೀನಿವಾಸರಾವ್, ಡಾ. ಡಿ. ಎಲ್. ರಮೇಶ್ ಗೋಪಾಲ್, ವಿವಿಧ ಕಮಿಟಿಗಳ ಅಧ್ಯಕ್ಷರು, ವಿಶೇಷ ಆಹ್ವಾನಿತರು ಹಾಗೂ ವಿಶೇಷ ಸಮನ್ವಯ ಸಮಿತಿ ಸದಸ್ಯರು ಉಪಸ್ಥಿತರಿದ್ದು ಎನ್. ಸಾಯಿ ಶ್ರಾವ್ಯ ಅವರನ್ನು ಅಭಿನಂದಿಸಿದರು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ