LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News Districts

40 ನೇ ರಾಜ್ಯಮಟ್ಟದ ಟೈಕೊಂಡೋ ಟೂರ್ನಿ

ವಿವಿಧ ವಿಭಾಗಗಳಲ್ಲಿ ಪಾರಮ್ಯ ಸಾಧಿಸಿದ ತುಮಕೂರು, ಬೆಂಗಳೂರು, ಚಿತ್ರದುರ್ಗ ತಂಡಗಳು

ಬೆಂಗಳೂರು : 40 ನೇ ರಾಜ್ಯ ಮಟ್ಟದ ಸಬ್ ಜೂನಿಯರ್, ಕೆಡಿಟ್, ಜೂನಿಯರ್ ಮತ್ತು ಸೀನಿಯರ್  ಟೈಕೊಂಡೋ ಪಂದ್ಯಾವಳಿ ದಾವಣಗೆರೆ ಜಿಲ್ಲೆ ಹರಿಹರ ತಾಲೂಕು ಮಲೆಬೆನ್ನೂರಿನಲ್ಲಿ ನ. 6 ,7 ಮತ್ತು 8 ರಂದು ನಡೆದಿದ್ದು, ವಿವಿಧ ವಿಭಾಗಗಳಲ್ಲಿ ತುಮಕೂರು, ಬೆಂಗಳೂರು, ಚಿತ್ರದುರ್ಗ ತಂಡಗಳು ಪಾರಮ್ಯ ಸಾಧಿಸಿವೆ.

ಸಬ್ ಜೂನಿಯರ್ ಬಾಲಕಿಯರ ವಿಭಾಗದಲ್ಲಿ ತುಮಕೂರು ಜಿಲ್ಲೆ ಪ್ರಥಮ ಸ್ಥಾನ ಪಡೆದಿದ್ದು, ಚಿತ್ರದುರ್ಗ ದ್ವಿತೀಯ, ಬೆಂಗಳೂರು ತೃತೀಯ ಸ್ಥಾನ ಪಡೆದುಕೊಂಡಿತು. ಸಬ್ ಜೂನಿಯರ್ ಬಾಲಕರ ವಿಭಾಗದಲ್ಲಿ ಬೆಂಗಳೂರು ಪ್ರಥಮ, ತುಮಕೂರು ದ್ವಿತೀಯ ಮತ್ತು ದಾವಣಗೆರೆ ತೃತೀಯ ಸ್ಥಾನ ಪಡೆಯಿತು.



ಕೆಡಿಟ್ ಬಾಲಕಿಯರ ವಿಭಾಗದಲ್ಲಿ ತುಮಕೂರು, ಬೆಂಗಳೂರು ಮತ್ತು ಚಿತ್ರದುರ್ಗ, ಕೆಡಿಟ್ ಬಾಲಕರ ವಿಭಾಗದಲ್ಲಿ ತುಮಕೂರು, ಚಿತ್ರದುರ್ಗ  ಮತ್ತು ಬೆಳಗಾಂ, ಜೂನಿಯರ್ ಬಾಲಕಿಯರ ವಿಭಾಗ ಮಟ್ಟದಲ್ಲಿ ಚಿತ್ರದುರ್ಗ ಪ್ರಥಮ, ದಾವಣಗೆರೆ ದ್ವಿತೀಯ ಮತ್ತು ಬೆಂಗಳೂರು ತೃತೀಯ ಸ್ಥಾನ ಪಡೆದುಕೊಂಡಿತು.

ಜೂನಿಯರ್ ಬಾಲಕರ ವಿಭಾಗ ಮಟ್ಟದಲ್ಲಿ ಬೆಂಗಳೂರು, ಚಿತ್ರದುರ್ಗ ಮತ್ತು ದಾವಣಗೆರೆ, ಸೀನಿಯರ್ ಬಾಲಕಿಯರ ವಿಭಾಗ ಮಟ್ಟದಲ್ಲಿ ಬೆಂಗಳೂರು, ತುಮಕೂರು ಮತ್ತು ದಾವಣಗೆರೆ ಪ್ರಶಸ್ತಿ ಮುಡಿಗೇರಿಸಿಕೊಂಡಿತು ಎಂದು ಕರ್ನಾಟಕ ಟೈಕೊಂಡೊ ಅಸೋಸಿಯೇಷನ್ ಅಧ್ಯಕ್ಷ ಜೆ. ತಿರುಮಲ ತಿಳಿಸಿದ್ದಾರೆ.



ಕ್ರೀಡಾಕೂಟದಲ್ಲಿ 500 ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸಿದ್ದರು. ಸಂಸ್ಥೆಯ ಸಿಇಒ ಮನಫುಶ್, ಕಾರ್ಯದರ್ಶಿಗಳಾದ ವೆಂಕಟೇಶ್, ಜಂಟಿ ಕಾರ್ಯದರ್ಶಿ ಶ್ರೀಕಾಂತ, ಖಜಾಂಚಿ ಅನಿತಾ, ಎಂ ಸುನೀತ ಹಾಗೂ ಹೊರ ರಾಜ್ಯಗಳಿಂದ ಆಗಮಿಸಿದ ತೀರ್ಪುಗಾರರು ಕೂಡ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ರಾಜ್ಯಮಟ್ಟದಲ್ಲಿ ಬಂಗಾರದ ಪದಕ ಪಡೆದ ಕೆಡಿಟ್ ಮತ್ತು ಸೀನಿಯರ್ ವಲಯದ ಕ್ರೀಡಾಪಟುಗಳು ಇದೇ ತಿಂಗಳು  21,22, ಮತ್ತು 23 ಉತ್ತರ ಪ್ರದೇಶದಲ್ಲಿ ನಡೆಯಲಿರುವ  ರಾಷ್ಟ್ರ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ ಎಂದು ತಿಳಿಸಿದರು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ