ಈ ಕಾರ್ಯಕ್ರಮವನ್ನು ಸ್ಪಟಿಕಪುರಿ ಮಹಾಸಂಸ್ಥಾನದ ಶ್ರೀ ಶ್ರೀ ಶ್ರೀ ನಂಜಾವಧೂತ ಮಹಾಸ್ವಾಮೀಜಿರವರು, ಬೇಲಿ ಮಠದ ಶ್ರೀ ಶ್ರೀ ಶ್ರೀ ಶಿವರುದ್ರ ಮಹಾಸ್ವಾಮೀಜಿಗಳು, ಸದಸ್ಯರು ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ಮಂಡಳಿ ಡಾ. ಎಂ. ನವೀನ್ ಕುಮಾರ್, ಒಕ್ಕಲಿಗರ ಯುವ ಬ್ರಿಗೇಡ್ ಅಧ್ಯಕ್ಷರಾದ ನಂಜೇಗೌಡ ನಂಜುಂಡ ಹಾಗೂ ಸ್ಮಾರ್ಟ್ ಕ್ವಿಕ್ ಸಂಸ್ಥೆಯ ಸಂಸ್ಥಾಪಕರಾದ ದೀಪುಗೌಡರವರು ದೀಪ ಬೆಳಗಿಸಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ಶ್ರೀ ಶ್ರೀ ನಂಜಾವಧೂತ ಮಹಾಸ್ವಾಮೀಜಿ ಅವರು, “ಸರ್ಕಾರ ಎಲ್ಲ ಕೆಲಸವನ್ನೂ ಮಾಡಲಾಗುವುದಿಲ್ಲ. ಖಾಸಗಿಕರಣದ ಮೂಲಕ ಉದ್ಯೋಗ ಸೃಷ್ಟಿ ಮತ್ತು ಆರ್ಥಿಕ ಚೇತನ ಸಾಧ್ಯ. ಇ-ಕಾಮರ್ಸ್ ಮೂಲಕ ನಗರದಲ್ಲಿಯೇ ಅಲ್ಲ, ಗ್ರಾಮೀಣ ಭಾಗಗಳಿಗೂ ಸೇವೆ ತಲುಪಬೇಕು. ಇದರಿಂದ ಗ್ರಾಮೀಣ ಮಕ್ಕಳಿಗೆ ಉದ್ಯೋಗ ಹಾಗೂ ಆರ್ಥಿಕ ಸ್ವಾವಲಂಬನೆ ದೊರೆಯುತ್ತದೆ” ಎಂದು ಹೇಳಿದರು.
ಸಂಸ್ಥಾಪಕರಾದ ದೀಪುಗೌಡ ಅವರು ಮಾತನಾಡಿ, “ಇ-ಕಾಮರ್ಸ್ ಉದ್ಯಮ ಇಂದು ನಿರುದ್ಯೋಗ ನಿವಾರಣೆ, ಆರ್ಥಿಕ ಸ್ವಾವಲಂಭನೆ ಹಾಗೂ ಸ್ವಯಂ ಉದ್ಯೋಗಕ್ಕೆ ದೊಡ್ಡ ವೇದಿಕೆಯಾಗಿದೆ. ನಮ್ಮ ಸಂಸ್ಥೆ ಸ್ಮಾರ್ಟ್ ಕ್ವಿಕ್ ಒಂದು ವರ್ಷದಲ್ಲಿ ಲಕ್ಷಾಂತರ ಗ್ರಾಹಕರ ವಿಶ್ವಾಸ ಗಳಿಸಿದೆ. ಸಾವಿರಾರು ಯುವಕರಿಗೆ ಉದ್ಯೋಗ ಒದಗಿಸಿದೆ. ನಾವು ಸೂಪರ್ ಮಾರ್ಕೆಟ್ ಆರಂಭಿಸಿದ್ದು, ಮುಂದಿನ ಆರು ತಿಂಗಳಲ್ಲಿ 10ಕ್ಕೂ ಹೆಚ್ಚು ಶಾಖೆಗಳನ್ನು ಜೈಪುರ ಸೇರಿದಂತೆ ಹಲವು ನಗರಗಳಲ್ಲಿ ಆರಂಭಿಸಲು ಯೋಜಿಸಿದೆವು” ಎಂದು ಹೇಳಿದರು.