
ಈ ಸಂದರ್ಭದಲ್ಲಿ ಸಂಘದ ಜಿಲ್ಲಾ ಅಧ್ಯಕ್ಷ ಗೋವಿಂದ್ ಮಾತನಾಡುತ್ತಾ ಇತ್ತೀಚೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕಾರ್ಮಿಕ ವಿರೋಧಿ ಮತ್ತು ರೈತ ವಿರೋಧಿ ನೀತಿಗಳನ್ನು ಜಾರಿಗೆ ತರುತ್ತಿವೆ. ಈ ನೀತಿಗಳು ಸಂಪೂರ್ಣವಾಗಿ ದುಡಿದು ದೇಶವನ್ನು ಕಟ್ಟುತ್ತಿರುವ ವರ್ಗವನ್ನು ಸಂಪೂರ್ಣವಾಗಿ ನಾಶಮಾಡಲು ಹೊರಟಿರುವ ನೀತಿಗಳಾಗಿವೆ ಎಂದು ಆರೋಪಿಸಿದರು.