LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Crime News

ಬೈಕ್ ಕಳ್ಳನ ಬಂಧನ : 24 ಬೈಕ್ ವಶ

ಮುನಿರಾಬಾದ್ : ಕೊಪ್ಪಳ  ಸೇರಿದಂತೆ ವಿವಿಧೆಡೆ ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿರುವ ಮುನಿರಾಬಾದ್ ಠಾಣೆ ಪೋಲಿಸರು, ಆತನಿಂದ 24 ಬೈಕ್‍ಗಳನ್ನು ವಶಪಡಿಸಿಕೊಂಡಿದ್ದಾರೆ.

ಗಸ್ತು ವೇಳೆ ಸಂಶಯಾಸ್ಪದವಾಗಿ ತಿರುಗಾಡುತ್ತಿದ್ದ ಗಂಗಾವತಿ ತಾಲೂಕಿನ ಉಡಮಕಲ್ ಗ್ರಾಮದ ಶರಣಪ್ಪ ತಂದೆ ಇಂದ್ರೇಪ್ಪ ಮರಳಿ (26) ಬಂಧಿತ ಆರೋಪಿ.

ಗಿಣಿಗೇರಿ ಬಸಾಪುರ ಗ್ರಾಮದ ಬಾಳಪ್ಪ ಹನುಮಂತಪ್ಪ ಸಿಂಧೋಗಿ ಅವರು ನೀಡಿದ ಬೈಕ್ ಕಳ್ಳತನದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿದ ಪೋಲೀಸರು, ಅಂದಾಜು 16 ಲಕ್ಷ ಮೌಲ್ಯದ ವಿವಿಧ ಕಂಪನಿಯ 24 ಬೈಕ್‍ಗಳನ್ನು ವಶಪಡಿಸಿಕೊಂಡಿದ್ದಾರೆ.



ಪ್ರಕರಣದ ಪತ್ತೆಗೆ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಆರ್ ಹೇಮಂತ್ ಕುಮಾರ್  ಅವರ ಮಾರ್ಗದರ್ಶನದಲ್ಲಿ ಡಿಎಸ್ಪಿ ಮುತ್ತಣ್ಣ ಸರವಗೋಳ ಸಿಪಿಐ ಸುರೇಶ್ ಚೌವ್ಹಾಣ್ ನೇತೃತ್ವದಲ್ಲಿ ಪಿಎಸ್ಐ ಸುನಿಲ್ ಎಚ್, ಹಾಗೂ ಕ್ರೈಂ ಪಿಎಸ್ಐ ಮಲ್ಲಪ್ಪ, ಇನಾಯತ್, ಮಹೇಶ್ ಸಜ್ಜನ್, ರಾಜಶೇಖರ್,ಈರೇಶ, ಶಿವಶಂಕರ್, ಮಹಾಂತೇಶ,ವಾಹನ ಚಾಲಕರಾದ ವೆಂಕಟೇಶ್, ಚಂದ್ರಶೇಖರ್, ಶರಣಪ್ಪ, ಹೆಡ್  ಕಾನ್‍ಸ್ಟೆಬಲ್ ಹಾಗೂ ಪಿಸಿ ಅವರನ್ನೊಳಗೊಂಡ ತಂಡ ಆರೋಪಿಯನ್ನು ಬಂಧಿಸಿದೆ.

ಯಶಸ್ವಿ ಕಾರ್ಯಾಚರಣೆ ನಡೆಸಿದ ಪೋಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಪೋಲೀಸ್ ಅಧೀಕ್ಷಕರು ಡಾ.ರಾಮ್, ಎಲ್ ಅರೆ ಸಿದ್ದಿ ಪ್ರಶಂಸೆ ವ್ಯಕ್ತಪಡಿಸಿ ಬಹುಮಾನ ಘೋಷಿಸಿದ್ದಾರೆ.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ