
ನಂತರ ಸುದ್ದಿಗಾರರ ಜೊತೆ ಮಾತನಾಡಿದ ವಿಜಯೇಂದ್ರ, ಸೌಜನ್ಯರ ಕೊಲೆ ವಿಚಾರವಾಗಿ ಅವರ ಕುಟುಂಬ ಸುಪ್ರೀಂ ಕೋರ್ಟಿನಲ್ಲಿ ಮೇಲ್ಮನವಿ ಸಲ್ಲಿಸಿದರೆ, ಅಲ್ಲಿನ ಸಂಪೂರ್ಣ ವೆಚ್ಚವನ್ನು ಬಿಜೆಪಿ ಭರಿಸಲಿದೆ ಎಂದು ತಿಳಿಸಿದ್ದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದರು.
ಸೌಜನ್ಯ ಅವರ ತಾಯಿ ಮತ್ತು ಅವರ ಕುಟುಂಬದ ಸದಸ್ಯರನ್ನು ಭೇಟಿ ಮಾಡಿದ್ದೇವೆ. ಇಂದು ಬೆಳಿಗ್ಗೆ ಶಾಸಕರು, ಜಿಲ್ಲಾಧ್ಯಕ್ಷರು, ಸಂಸದರ ಜೊತೆ ಮಾತನಾಡಿದ್ದೆ. ಅಲ್ಲದೇ ಇಲ್ಲಿಗೆ ಬರುವ ಅಪೇಕ್ಷೆ ವ್ಯಕ್ತಪಡಿಸಿದ್ದೆ. ಸಮಾವೇಶ ಮುಗಿದ ಬಳಿಕ ಇಲ್ಲಿಗೆ ಬಂದಿರುವುದಾಗಿ ತಿಳಿಸಿದರು.

ನಾವು ನಿಮ್ಮ ಜೊತೆ ಸಂಪೂರ್ಣವಾಗಿ ಇದ್ದೇವೆ ಎಂದು ತಿಳಿಸಿದ್ದಾಗಿ ಹೇಳಿದರು. ಸೌಜನ್ಯರ ತಾಯಿ, ಮಗಳ ಸಾವಿನ ನೋವಿನಿಂದ ಇನ್ನೂ ಹೊರಬಂದಿಲ್ಲ ಎಂದು ಅವರು ತಿಳಿಸಿದರು.