ತೀವ್ರ ಬಿಸಿಲಿನ ಬೇಗೆಯನ್ನು ಲೆಕ್ಕಿಸದೆ ರಥೋತ್ಸವದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿದ್ದು ವಿಶೇಷವಾಗಿತ್ತು.
ರಥೋತ್ಸವದ ಅಂಗವಾಗಿ ದೇವಸ್ಥಾನದಲ್ಲಿ ಶ್ರೀರಾಮನವಮಿ ಬೆಳಿಗ್ಗೆ ಹೋಮ, ಹವನ, ವಿಶೇಷ ಪೂಜೆ ಧಾರ್ಮಿಕ ವಿಧಿಧಿವಿಧಾನಗಳು ಜರುಗಿದವು. ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದು ಹೂ, ಹಣ್ಣು, ಕಾಯಿ ಸಮರ್ಪಿಸಿ ಭಕ್ತಿ ಮೆರೆದರು.

ಇಟಗಿ ಹಿರೇಮಠ ಸಂಸ್ಥಾನದ ಗುರುಶಾಂತವೀರ, ಕಲ್ಲುಕಂಭ ರುದ್ರಮುನಿ ತಾತ ಮತ್ತು ಕರಿಬಸವ ಶರಣರು ಪೂಜೆಸಲ್ಲಿಸಿ ರಥೋತ್ಸವಕ್ಕೆ ಚಾಲನೆ ನೀಡಿದರು.ಇದ್ದರು.
ಸಂಜೆ ಅಂಕೃತ ರಥವನ್ನು ದೇವಸ್ಥಾನದ ಆವರಣದಿಂದ ಪಾದಗಟೆ ವರೆಗೆ ಎಳೆದು ನಂತ ಸ್ವಸ್ಥಳಕ್ಕೆ ಭಕ್ತರು ಎಳೆದುತಂದರು. ರಥ ಎಳೆಯುವ ಸಂದರ್ಭದಲ್ಲಿ ಭಕ್ತರು ಆಂಜನೇಯಸ್ವಾಮಿಗೆ ಜಯಕಾರ ಕೂಗಿದರು.
ಬಾದನಹಟ್ಟಿ ಸೇರಿದಂತೆ ಸಿದ್ದಮ್ಮನಹಳ್ಳಿ, ಯರಿಂಗಳಿಗಿ, ಕುರುಗೋಡು, ಯಲ್ಲಾಪುರ, ವದ್ದಟ್ಟಿ ಗ್ರಾಮಗಳ ಜನರು ರಥೋತ್ಸವ ವೀಕ್ಷಣೆಗೆ ಆಗಮಿಸಿದ್ದರು. ರಥಕ್ಕೆ ಹೂ ಹಣ್ಣು ಎಸೆದು ಭಕ್ತಿ ಮೆರೆದರು.
ರಥೋತ್ವದ ಅಂಗವಾಗಿ ಕಳೆದ ಒಂಭತ್ತು ದಿನಗಳ ಕಾಲ ಜರುಗಿದ ಸಪ್ತಭಜನೆ ಶುಕ್ರವಾರ ಕೊನೆಗೊಂಡಿತು.
ಪೋಲಿಸ್ ಸಿಬ್ಬಂದಿಯನ್ನು ನಿರೋಜಿಸಿ ಅಹಿತಕರ ಘಟನೆ ನಡೆಯದಂತೆ ಬಂದಾಬಸ್ತ್ ಮಾಡಿದ್ದರು,
ರಥೋತ್ವದ ಅಂಗವಾಗಿ ಕಳೆದ ಒಂಭತ್ತು ದಿನಗಳ ಕಾಲ ಜರುಗಿದ ಸಪ್ತಭಜನೆ ಭಾನುವಾರ ಕೊನೆಗೊಂಡಿತು. ರಾತ್ರಿ, ಬಯಲು ನಾಟಕ ಪ್ರದರ್ಶನಗೊಂಡವು..