LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News Districts

ಕೆರೆಗಳಿಗೆ ಶೀಘ್ರ ಭದ್ರೆ ನೀರು: ಪೈಪ್ಲೈನ್ ಕಾಮಗಾರಿ ಆರಂಭ

ಹೊಳಲ್ಕೆರೆಭದ್ರಾ ಮೇಲ್ದಂಡೆ ಮುಖ್ಯ ಕಾಲುವೆಯಿಂದ ಹೊಳಲ್ಕೆರೆ ತಾಲ್ಲೂಕಿನ 30 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಅಡ್ಡಿಯಾಗಿದ್ದ ಭೂಸ್ವಾಧೀನ ಪ್ರಕ್ರಿಯೆ ಸಮಸ್ಯೆಗೆ ಮಾಜಿ ಸಚಿವ ಹೆಚ್.ಆಂಜನೇಯ ಸಂಧಾನದ ಮೂಲಕ ತೆರೆ ಎಳೆದಿದ್ದಾರೆ.

 

ಗಂಗಸಮುದ್ರದಲ್ಲಿ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿ ಸ್ಥಳಕ್ಕೆ ಶನಿವಾರ ಭೇಟಿ ನೀಡಿ ವೀಕ್ಷಿಸಿದ ಬಳಿಕ ರೈತರೊಂದಿಗೆ ಚರ್ಚಿಸಿದರು.  ಪೈಪ್‌ಲೈನ್ ಹಾಗೂ ನೀರು ಸಂಗ್ರಹ ಟ್ಯಾಂಕ್ ನಿರ್ಮಾಣಕ್ಕೆ ಭೂಮಿ ನೀಡಲು ಆಕ್ಷೇಪ ವ್ಯಕ್ತಪಡಿಸಿದ್ದ ನಾಲ್ವರು ರೈತರನ್ನು ಮನವೊಲಿಸಿದರು. ಆರಂಭದಲ್ಲಿ ನಾಲ್ವರು ರೈತರು ನಮಗೆ ಸೂಕ್ತ ಪರಿಹಾರ ನೀಡಬೇಕೆಂದು ಪಟ್ಟು ಹಿಡಿದರು.ಜೊತೆಗೆ ಅನೇಕ ಬೇಡಿಕೆಗಳನ್ನು ಮುಂದಿಟ್ಟರು.  ಎಲ್ಲ ಮಾತುಗಳನ್ನು ಆಲಿಸಿದ ಆಂಜನೇಯ ಅವರು, ಭದ್ರಾ ಮೇಲ್ದಂಡೆ ಯೋಜನೆ ವ್ಯಾಪ್ತಿಯಿಂದ ಹೊಳಲ್ಕೆರೆ ತಾಲ್ಲೂಕು ಕೈಬಿಟ್ಟು ಹೋಗಿತ್ತು. ಇದನ್ನು ಪ್ರಶ್ನೀಸಿ ಯಾರೊಬ್ಬರೂ ಧ್ವನಿಯೆತ್ತಲಿಲ್ಲ. ಆದರೆ, ನಾನು ಸಮಾಜ ಕಲ್ಯಾಣ ಸಚಿವನಾಗಿದ್ದ ಸಂದರ್ಭ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒಪ್ಪಿಸಿ ಯೋಜನೆ ವ್ಯಾಪ್ತಿಗೆ ಹೊಳಲ್ಕೆರೆ ತಾಲ್ಲೂಕನ್ನು ಸೇರ್ಪಡೆ ಮಾಡಿದೆ ಎಂದರು.

 

ಜೊತೆಗೆ 110 ಕೋಟಿ ರೂ. ವೆಚ್ಚದಲ್ಲಿ 22 ಕೆರೆಗಳಿಗೆ ಭದ್ರೆ ನೀರು ತುಂಬಿಸುವ ಮಹತ್ವದ ಯೋಜನೆಗೆ ಟೆಂಡರ್ ಪ್ರಕ್ರಿಯೆ ನಡೆಸಿ, ಕಾಮಗಾರಿ ಆರಂಭಿಸಲಾಗಿತ್ತು. ಆದರೆ, ಈ ಯೋಜನೆ ಪೂರ್ಣಗೊಂಡಲ್ಲಿ ಆಂಜನೇಯ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಹೆಸರು ಬರಲಿದೆ ಎಂದು ಕೆಲವರು ಅನಗತ್ಯವಾಗಿ ಕಾಮಗಾರಿ ಮಂದಗತಿ ಆಗುವ ರೀತಿ ಷಡ್ಯಂತರ ನಡೆಸಿದರು ಎಂದು ದೂರಿದರು.

 

ಆದರೂ ಯೋಜನೆ ತ್ವರಿತಗತಿಯಲ್ಲಿ ಸಾಗಲು ಅನುದಾನ, ತಾಂತ್ರಿಕ ಸೇರಿ ಎಲ್ಲ ರೀತಿ ಸಮ್ಮತಿ ಸರ್ಕಾರದಿಂದ ಒಪ್ಪಿಗೆ ತರುವಲ್ಲಿ ಶ್ರಮಿಸಿದ್ದೇನೆ. ಜೊತೆಗೆ ಯಾವೊಬ್ಬ ರೈತರಿಗೂ ಪರಿಹಾರದಲ್ಲಿ ಅನ್ಯಾಯವಾಗದ ರೀತಿ ಒತ್ತಡ ತಂದಿರುವೆ. ಆದರೆ, ನಾಲ್ವರು ರೈತರು ಆಕ್ಷೇಪ ವ್ಯಕ್ತಪಡಿಸಿರುವುದರಿಂದ ಮಹತ್ವದ ಯೋಜನೆಗೆ ಅಡ್ಡಿಯಾಗಿದೆ. ಸರ್ಕಾರದ ನೀತಿನಿಯಮದಂತೆ ನಿಮಗೆ ಸೂಕ್ತ ಪರಿಹಾರ ಕೊಡಿಸಲಾಗುವುದು ಎಂದರು.



ಒಟ್ಟು 200 ಕೋಟಿ ರೂ. ವೆಚ್ಚದಲ್ಲಿ ತಾಳ್ಯ ಸೇರಿ ಹೆಚ್ಚುವರಿ ಗ್ರಾಮಗಳ ಸೇರ್ಪಡೆಯೊಂದಿಗೆ 30 ಕೆರೆಗಳನ್ನು ಭದ್ರೆ ನೀರಿನಿಂದ ತುಂಬಿಸಿ ತಾಲ್ಲೂಕಿನಲ್ಲಿ ಕೃಷಿ ಚಟುವಟಿಕೆ ಗರಿಗೆದರುವ ಜೊತೆಗೆ ರೈತರ ಬದುಕು ಹಸನುಗೊಳಿಸುವ ಪ್ರಯತ್ನಕ್ಕೆ ರೈತರು ಬೆಂಬಲವಾಗಿ ನಿಲ್ಲಬೇಕೆಂದು ಕೋರಿದರು.

 

ತಕ್ಷಣ ಭೂಮಿ ನೀಡಲು ಆಕ್ಷೇಪ ವ್ಯಕ್ತಪಡಿಸಿದ್ದ ರೈತರು ಯೋಜನೆ ಕಾಮಗಾರಿಗೆ ಭೂಮಿ ನೀಡುವುದಾಗಿ ವಾಗ್ದಾನ ನೀಡಿದರು. ಈ ವೇಳೆ ರೈತರನ್ನು ಅಭಿನಂದಿಸಿ ಮಾತನಾಡಿದ ಆಂಜನೇಯ, ಅರೆಮಲೆನಾಡು  ಎಂಬ ಖ್ಯಾತಿಯ ಹೊಳಲ್ಕೆರೆ ಈಚೆಗೆ ಬರಗಾಲಕ್ಕೆ ತುತ್ತಾಗುತ್ತಿದೆ. ಅದರಿಂದ ಹೊರಬರಲು ಭದ್ರಾ ಮೇಲ್ದಂಡೆ ಯೋಜನೆ ಸಹಕಾರಿ ಆಗಲಿದೆ. ಜನ-ಜಾನುವಾರುಗಳಿಗೆ ಕುಡಿಯುವ ನೀರಿಗೆ ಶಾಶ್ವತ ಪರಿಹಾರ ದೊರಕಿಸಲಿದೆ. ಅಂತರ್ಜಲ ಹೆಚ್ಚಿ, ಕೊಳವೆಬಾವಿಗಳಲ್ಲಿ ನೀರು ಹೆಚ್ಚಲಿದೆ. ಈ ಕಾರ್ಯಕ್ಕೆ ಭೂಮಿ ನೀಡುವ ರೈತರ ಉದಾರತೆಗೆ ನಾವೆಲ್ಲರೂ ಕೃತಜ್ಞರಾಗಿರುತ್ತೇವೆ. ಈ ಮೂಲಕ ತಾಲ್ಲೂಕಿನಲ್ಲಿ ಕೃಷಿಕರು ಆರ್ಥಿಕವಾಗಿ ಸಬಲರಾಗಲಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.

 

ಭದ್ರಾ ಮೇಲ್ದಂಡೆ ಮುಖ್ಯ ಕಾಲುವೆಯಿಂದ ಗಂಗಸಮುದ್ರದಲ್ಲಿನ ಟ್ಯಾಂಕ್‌ಗೆ ನೀರು ಹರಿದುಬರಲಿದ್ದು, ದೇವರಹೊಸಹಳ್ಳಿ, ತಾಳಿಕಟ್ಟೆ, ದುಮ್ಮಿ, ಕೆಂಗುಂಟೆ,ರಂಗಾಪುರ, ಹನುಮಲಿ,ಆರ್.ನುಲೇನೂರು, ಚಿಕ್ಕಜಾಜೂರು ಸೇರಿ 30 ಕೆರೆಗಳಿಗೆ ಭದ್ರೆ ನೀರು ತುಂಬಲಿದ್ದು, ಈ ಮೂಲಕ ಕ್ಷೇತ್ರದ ಜನಜೀವನ ಸುಧಾರಿಸಲಿದೆ ಎಂದರು.

 

ಈ ಸಂದರ್ಭದಲ್ಲಿ ತಹಸೀಲ್ದಾರ್ ವಿಜಯಕುಮಾರ್, ಭದ್ರಾ ಮೇಲ್ದಂಡೆ ಯೋಜನೆಯ ಎಇಇ ನಾಗರಾಜ್, ಎಇ ಕಿರಣ್,ತಾಪಂ ಇಒ ವಿಶ್ವನಾಥ್, ಸರ್ಕಲ್ ಇನ್ಸಪೆಕ್ಟರ್ ಚಿಕ್ಕಣ್ಣನವರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಟಿ.ಹನುಮಂತಪ್ಪ, ತಾಪಂ ಮಾಜಿ ಸದಸ್ಯರಾದ ರಾಮಚಂದ್ರಪ್ಪ, ಎಂ.ಎಸ್.ನಾಗಪ್ಪ,  ನಾಗಣ್ಣ, ಜಿಪಂ ಮಾಜಿ ಸದಸ್ಯರಾದ ಗಂಗಾಧರ್, ಲೋಹಿತ್ ಕುಮಾರ್, ಡಿ.ಕೆ.ಶಿವಮೂರ್ತಿ, ರಂಗಸ್ವಾಮಿ, ಶಿವಪುರದ ಶಿವಕುಮಾರ್, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಮುತ್ತುಗದೂರು ರುದ್ರಣ್ಣ ಇತರರಿದ್ದರು.

ಇದೇ ವೇಳೆ ಸುತ್ತಮುತ್ತಲಿನ ಗ್ರಾಮಸ್ಥರು ಆಂಜನೇಯ ಅವರನ್ನು ಅಭಿನಂದಿಸಿದರು.

 

ಮೊದಲಿಗೆ ಸ್ಪರ್ಶ ಇಡೀ ಜಿಲ್ಲೆಯಲ್ಲಿಯೇ ಮೊದಲಿಗೆ ಭದ್ರೆ ನೀರು ಹರಿದುಬರುವುದು ಹೊಳಲ್ಕೆರೆ ತಾಲ್ಲೂಕಿಗೆ. ಕಾರ್ಯಕ್ಕೆ ರೈತ, ಜನಪರ ಸಂಘಟನೆಗಳು ಬೆಂಬಲವಾಗಿ ನಿಂತಿವೆ. ಇಂತಹ ವೇಳೆ ಸಣ್ಣ ಅಡ್ಡಿಯೂ ಯೋಜನೆ ಪೂರ್ಣಕ್ಕೆ ತೀವ್ರ ಅಡ್ಡಿಯಾಗಿತ್ತು. ಈಗ ಭೂಮಿ ನೀಡಲು ರೈತರು ಒಪ್ಪಿಗೆ ಸೂಚಿಸುವ ಮೂಲಕ ಎಲ್ಲ ಸಮಸ್ಯೆಗಳಿಗೂ ತೆರೆ ಎಳೆದಿದ್ದಾರೆ ಎಂದು ಆಂಜನೇಯ ಸಂತಸ ವ್ಯಕ್ತಪಡಿಸಿದರು. ಇನ್ನೂ ಎರಡು ತಿಂಗಳಲ್ಲಿ ತಾಲ್ಲೂಕಿನ 30 ಕೆರೆಗಳು ಮೈದುಂಬಲಿದ್ದು, ಕೃಷಿ ಕ್ಷೇತ್ರ ಪ್ರಬಲವಾಗಲಿದೆ ಎಂದು ತಿಳಿಸಿದರು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ