LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಿಜೆಪಿ ಕಾರ್ಯಕರ್ತರಿಗೆ ಬಿಎಲ್ಎ-2 ಕಾರ್ಯಾಗಾರ

ಬಳ್ಳಾರಿ : ನಗರದಲ್ಲಿ ಬಿಜೆಪಿ ಘಟಕದ ವತಿಯಿಂದ ನಡೆದ ಬಿಎಲ್ ಎ-2 ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಾಗಾರದಲ್ಲಿ ಭಾಗವಹಿಸಿ ಮತದಾರರ ಪಟ್ಟಿ ಪರಿಷ್ಕರಣೆ, ಕಾರ್ಯಕರ್ತರು ಪಕ್ಷದ ಚಟುವಟಿಕೆಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾತನಾಡಿದ ಮಾಜಿ ಸಚಿವ ಬಿ.ಶ್ರೀರಾಮುಲು, ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಮಹತ್ವ, ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ಅಕ್ರಮ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕುವ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡುವುದು ಸೇರಿದಂತೆ ಕೆಲವು ಮಹತ್ವದ ವಿಷಯಗಳ ಬಗ್ಗೆ ತಿಳಿ ಹೇಳಿದರು.



ಕಾರ್ಯರ್ತರು ಕೇಂದ್ರ ಸರ್ಕಾರದ ಯೋಜನೆಯನ್ನು ಜನರಿಗೆ ತಲುಪಿಸುವಲ್ಲಿ ಹೆಚ್ಚು ಸಕ್ರಿಯರಾಗಿ, ರಾಜ್ಯರ್ಕಾರದ ವೈಫಲ್ಯಗಳು, ಭ್ರಷ್ಟಾಚಾರ, ಕುಸಿಯುತ್ತಿರುವ ಕಾನೂನು ಸುವ್ಯವಸ್ಥೆ ಸೇರಿದಂತೆ ಮತ್ತಿತರ ವಿಷಯಗಳ ಬಗ್ಗೆ ಬೆಳಕು ಚೆಲ್ಲಿ ಜನರಿಗೆ ಮನವರಿಕೆ ಮಾಡಿಕೊಡುವ ಬಗ್ಗೆಯೂ ಸಲಹೆಗಳನ್ನು ನೀಡಿದರು.

ಈ ಸಂರ್ಭದಲ್ಲಿ ಬಿಎಲ್ ಎ -2 ಉಸ್ತುವಾರಿಯಾದ ಜಗದೀಶ್ ಹಿರೇಮನೆ, ಬಳ್ಳಾರಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಅನಿಲ್ ನಾಯ್ಡು ಮೋಕಾ, ಮಾಜಿ ಶಾಸಕ ಸೋಮಶೇಖರರೆಡ್ಡಿ,

ಮಾಜಿ ಸಂಸದರಾದ ಸಣ್ಣ ಪಕೀರಪ್ಪ, ಬಳ್ಳಾರಿ ನಗರ ಮಂಡಲ ಅಧ್ಯಕ್ಷ ಗುರ್ರಂ ವೆಂಕಟರಮಣ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST