LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News Districts

ವಾಲ್ಮೀಕಿ ವೃತ್ತಕ್ಕೆ ನಗರ ಶಾಸಕ ಭರತ್ ರೆಡ್ಡಿ ಭೇಟಿ

ಜನವರಿ 3ರಂದು ವಾಲ್ಮೀಕಿ ವಿಗ್ರಹ ಲೋಕಾರ್ಪಣೆ

ಬಳ್ಳಾರಿ : ನಗರದ ವಾಲ್ಮೀಕಿ ವೃತ್ತಕ್ಕೆ ನಗರ ಶಾಸಕ ಭರತ್ ರೆಡ್ಡಿ ಭೇಟಿ ನೀಡಿ, ವಾಲ್ಮೀಕಿ ವಿಗ್ರಹ ಪ್ರತಿಷ್ಠಾಪನೆಗೆ ಸಂಬಂಧಿಸಿದ ಸಿದ್ಧತೆಗಳನ್ನು ಪರಿಶೀಲಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ಈ ಕಾರ್ಯಕ್ರಮವನ್ನು ಪಕ್ಷಾತೀತವಾಗಿ ಎಲ್ಲ ವಾಲ್ಮೀಕಿ ಭಕ್ತರು ಹಾಗೂ ಸಾರ್ವಜನಿಕರನ್ನು ಒಂದೇ ವೇದಿಕೆಗೆ ಸೇರಿಸುವ ಉದ್ದೇಶದಿಂದ ಹಮ್ಮಿಕೊಳ್ಳಲಾಗುತ್ತಿದೆ. ಅಯೋಧ್ಯೆಯಲ್ಲಿ ಶ್ರೀರಾಮನ ಶಿಲ್ಪ ಕೆತ್ತನೆ ಮಾಡಿದ ಖ್ಯಾತ ಕಲಾವಿದ ಅರುಣ್ ಯೋಗಿರಾಜ್ ಅವರಿಂದಲೇ ಬಳ್ಳಾರಿಯ ವಾಲ್ಮೀಕಿ ಶಿಲ್ಪವನ್ನು ಕೆತ್ತಿಸಲಾಗಿದೆ ಎಂಬುದು ಈ ಕಾರ್ಯಕ್ರಮದ ವಿಶೇಷತೆ ಆಗಿದೆ. ವಾಲ್ಮೀಕಿ ವಿಗ್ರಹ ಪ್ರತಿಷ್ಠಾಪನೆ ಹಾಗೂ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿದ್ದು, ಪಂಚದಾನ, ಹೋಮ–ಹವನಗಳೊಂದಿಗೆ ಧಾರ್ಮಿಕ ವಿಧಿವಿಧಾನಗಳು ನೆರವೇರಲಿವೆ. ಜನವರಿ 3ರಂದು ಭವ್ಯವಾಗಿ ವಾಲ್ಮೀಕಿ ವಿಗ್ರಹ ಲೋಕಾರ್ಪಣೆ ನಡೆಯಲಿದ್ದು, ವಿವಿಧ ಗಣ್ಯರು, ಭಕ್ತರು ಹಾಗೂ ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆ ಇದೆ. ಈ ಐತಿಹಾಸಿಕ ಹಾಗೂ ಧಾರ್ಮಿಕ ಮಹತ್ವದ ಕಾರ್ಯಕ್ರಮವು ಬಳ್ಳಾರಿಯ ಸಾಂಸ್ಕೃತಿಕ ಪರಂಪರೆಯನ್ನು ಮತ್ತಷ್ಟು ಉತ್ತೇಜಿಸುವುದರ ಜೊತೆಗೆ, ಸಮಾಜದಲ್ಲಿ ಏಕತೆ ಮತ್ತು ಸೌಹಾರ್ದತೆಯ ಸಂದೇಶವನ್ನು ನೀಡಲಿದೆ ಎಂದು ನಗರ ಶಾಸಕ ಭರತ್ ರೆಡ್ಡಿ ಹೇಳಿದರು.

 

ಈ ಸಂದರ್ಭ ಪಾಲಿಕೆಯ ಆಯುಕ್ತ ಮಂಜುನಾಥ್ ಹಾಗೂ ವಾಲ್ಮೀಕಿ ನಾಯಕರ ಸಮಾಜದ ಮುಖಂಡರು ಹಾಜರಿದ್ದರು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ