LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News Districts

ಉತ್ತಮ ಕೆಲಸಗಳಿಗೆ ಗ್ರಾಮಸ್ಥರ ಸಹಕಾರ ಅಗತ್ಯ : ಶಾಂತಮಯ ಶ್ರೀ

ಸುರಪುರ : ತಾಲೂಕಿನ ಕುರುಬನ ತಳ್ಳಳ್ಳಿ ಗ್ರಾಮದ ಶ್ರೀ ಜಗದ್ಗುರು ರೇವಣಸಿದ್ದೇಶ್ವರರ ನೂತನ ಮಠದ ಭೂಮಿ ಪೂಜೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು .

 

ಈ ಸಂದರ್ಭದಲ್ಲಿ ನೂತನ ಮಠದ ಗುದ್ದಲಿ ಪೂಜೆ ನೆರವೇರಿಸಿ  ಅಗತೀರ್ಥ ಹಾಗೂ ಸರೂರ ಹಾಲುಮತದ ಮೂಲ ಗುರುಪೀಠದ  ಶ್ರೀ ಜಗದ್ಗುರು ರೇವಣಸಿದ್ದೇಶ್ವರ ಶಾಂತಮಯ ಮಹಾಸ್ವಾಮಿಗಳು ಮಾತನಾಡಿದರು.

 

ಗ್ರಾಮಗಳಲ್ಲಿ ಯಾವುದೇ ಸತ್ಕಾರ್ಯಗಳು ಪೂರ್ಣಗೊಳ್ಳಬೇಕಾದರೆ ಗ್ರಾಮಸ್ಥರ ಸಹಾಯ, ಸಹಕಾರದ ಜೊತೆಗೆ ನಾವೆಲ್ಲ ಒಂದೇ ಭಾವನೆಯಿಂದ ಒಗ್ಗಟ್ಟಾಗಿ ಕೆಲಸ ಮಾಡಿದರೆ ಮಾತ್ರ ಅಭಿವೃದ್ಧಿ ಸಾಧ್ಯ. ಶ್ರೀ ಮಠದ ಕಟ್ಟಡ ನಿರ್ಮಾಣ ಕಾಮಗಾರಿ ಇಂದಿನಿಂದ ಪ್ರಾರಂಭಗೊಂಡು  ಒಂದು ವರ್ಷದ ಅವಧಿಯಲ್ಲಿ ಪೂರ್ಣಗೊಳಿಸುಂತೆ ಗ್ರಾಮಸ್ಥರಿಗೆ ಸೂಚನೆ ನೀಡಿದರು.



ಮುಂದಿನ ದಿನಗಳಲ್ಲಿ ಶ್ರೀ ರೇವಣಸಿದ್ದೇಶ್ವರರ ಹೆಸರಿನಲ್ಲಿ ಮಠದಲ್ಲಿ ಪಲ್ಲಕ್ಕಿ ಉತ್ಸವ ಹಾಗೂ ಜಾತ್ರೆಯನ್ನು ಮುಂದುವರಿಸೋಣ ನಾನು ಯಾವತ್ತೂ ನಿಮ್ಮೋಂದಿಗಿದ್ದೇನೆ ಎಂದು ಆಶೀರ್ವಚನ ನೀಡಿದರು.

 

ಈ ಸಂದರ್ಭದಲ್ಲಿ ರೇವಣಸಿದ್ದಯ್ಯ ಗುರುವಿನ, ನಿಂಗಣ್ಣ ಸಾಹುಕಾರ ಮಾಲಗತ್ತಿ,ಸಾಹೇಬಗೌಡ ಪೊಲೀಸ್ ಪಾಟೀಲ, ಮಹಾದೇವಪ್ಪ ಪೂಜಾರಿ, ಚಿನ್ನಪ್ಪ ಚೂರಿ, ತಿರುಪತಿಗೌಡ ಕಾಕರಗಲ್ಲ, ಚನ್ನಪ್ಪ ಬೆಳ್ಳಿಕಟ್ಟಿ,ಮಲ್ಲನಗೌಡ ವಡಿಗೇರಿ, ಸೋಮಣ್ಣ ಮಾಲಗತ್ತಿ, ನಿಂಗಣ್ಣ ದೇವಿಕೇರಿ, ತಿಮ್ಮಣ್ಣ ದೊರಿ, ಸಾಯಬಣ್ಣ ಕತಿಗೇರ,ಗೌಡಪ್ಪ ಬಿರಾದಾರ, ರಾಘವೇಂದ್ರ ಮಾಸ್ತರ ಸೇರಿದಂತೆ ಗ್ರಾಮದ ಹಿರಿಯರು, ಯುವಕರು ಮತ್ತು ಮಕ್ಕಳು ಉಪಸ್ಥಿತರಿದ್ದರು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ