ಸ್ಥಳೀಯ ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಮೊದಲನೇ ಹಂತದಲ್ಲಿ ತಾಲ್ಲೂಕಿನಲ್ಲಿ ಸುಮಾರು 14 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಇದಾಗಿದೆ. ಆದರೆ ಕೆಬಿಜೆಎನ್ಎಲ್ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಕಾನೂನು ನಿಯಮವನ್ನು ಪಾಲಿಸದೆ ಏಕಾಏಕಿ ರೈತರ ಹೊಲದಲ್ಲಿ ಪೈಪ್ ಲೈನ್ ಹಾಕಲು ಮುಂದಾಗಿದ್ದಾರೆ. ಯೋಜನೆಗೆ ಸಂಭವಿಸಿದಂತೆ ಸರ್ಕಾರದ ಆದೇಶದ ಅನ್ವಯ ಸರ್ವೇ ಕಾರ್ಯ ಮಾಡಬೇಕು. ಇಲಾಖೆಯ ಅಧಿಕಾರಿಗಳು ರೈತರ ಒಪ್ಪಿಗೆ ಪಡೆಯಬೇಕು. ಆದರೆ ಯಾವ ನಿಯಮಗಳನ್ನು ಪಾಲಿಸದೆ ಗುತ್ತಿಗೆದಾರರ ಹಣದ ಆಮಿಷಕ್ಕೆ ಒಳಗಾಗಿ ರೈತರಿಗೆ ವಂಚನೆ ಮಾಡುತ್ತಿದ್ದಾರೆ. ಸದ್ಯ ಮುಂಗಾರು ಹಂಗಾಮಿನಲ್ಲಿ ಉತ್ತಮ ಮಳೆಯಾಗಿದೆ ಬೆಳೆಗಳು ಸಹ ಒಳ್ಳೆಯ ಸ್ಥಿತಿಗೆ ಬಂದಿವೆ. ಇಂತಹ ಸಮಯದಲ್ಲಿ ಪೈಪ್ ಲೈನ್ ನೆಪದಲ್ಲಿ ಹೊಲ ಹಾಗೂ ಬೆಳೆ ಎರಡು ಹಾಳಾಗುತ್ತಿವೆ. ಬೆಳೆ ಕಳೆದುಕೊಂಡ ರೈತರಿಗೆ ಪರಿಹಾರ ನೀಡಿ ಎಂದು ಕೇಳಿದರೆ ಉಡಾಫೆ ಉತ್ತರ ನೀಡುತ್ತಿದ್ದಾರೆ ಎಂದು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸರ್ವೇ ನಂಬರ್ 25 ರ ನಮ್ಮ ಪಿತ್ರಾರ್ಜಿತ ಆಸ್ತಿಯಲ್ಲಿ ಶೆಟ್ಟಿ ಕೆರೆ ಇದ್ದು ಈಗ ಆ ಕೆರೆಗೆ ನೀರು ತುಂಬಿಸುವ ಯೋಜನೆಗೆ ಪೈಪ್ ಲೈನ್ ಪ್ರಕ್ರಿಯೆ ಅಕ್ರಮವಾಗಿ ನಡೆಯುತ್ತಿದೆ. ಆದರೆ 15 ಎಕರೆ ಪ್ರದೇಶದಲ್ಲಿ ಬೆಳೆದ ಹತ್ತಿ ಬೆಳೆ ನಾಶವಾಗುತ್ತಿದೆ. ಅದಕ್ಕೆ ಪರಿಹಾರ ನೀಡಿ ಎಂಬುದು ನಮ್ಮ ಬೇಡಿಕೆ ಇದೆ ಆದರೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಇದೇ ರೀತಿ ನಿರ್ಲಕ್ಷ್ಯ ವಹಿಸಿದಲ್ಲಿ ರೈತರಿಂದ ಕಾನೂನಿನ ಮೊರೆ ಹೋಗುತ್ತೇವೆ ಎಂದು ತಿಳಿಸಿದರು.
ಈ ವೇಳೆ ಚಂದ್ರಶೇಖರ ಶೆಟ್ಟಿ ಹಾಗೂ ಸಾಮಾಜಿಕ ಹೋರಾಟಗಾರ ಶರಣು ಹೂಗಾರ ಸೇರಿದಂತೆ ಇತರರು ಇದ್ದರು.