
ನೂತನ ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷರನ್ನಾಗಿ ಚೇಳ್ಳಗುರ್ಕಿ ಹೆಚ್. ಆಂಜನೇಯ್ಯ, ಉಪಾಧ್ಯಕ್ಷರಾಗಿ ಟಿ.ಕ್ರಾಂತಿ ಕುಮಾರ್, ಕಾರ್ಯದರ್ಶಿಯಾಗಿ ಹೆಚ್, ಎಂ.ಹೊನ್ನೂರಸ್ವಾಮಿ, ಹೆಚ್.ರಮೇಶ್ ಮತ್ತು ಬಳ್ಳಾರಿ ಗ್ರಾಮಾಂತರ ತಾಲೂಕು ಕಾರ್ಮಿಕ ವಿಭಾಗದ ಅಧ್ಯಕ್ಷರನ್ನಾಗಿ ಚೇಳ್ಳಗುರ್ಕಿ ರಾಮಕೃಷ್ಣ ಇವರುಗಳಿಗೆ ಮಾಜಿ ಸಚಿವರಾದ ಬಿ.ನಾಗೇಂದ್ರ ಅವರು ನೂತನ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರವನ್ನು ವಿತರಿಸಿ ಶುಭ ಹಾರೈಸಿದರು.
ನಂತರ ಮಾತನಾಡಿದ ಮಾಜಿ ಸಚಿವ ಬಿ.ನಾಗೇಂದ್ರ ಅವರು ಕರ್ನಾಟಕ ಅಹಿಂದ ಜನ ಸಂಘದ ಬಳ್ಳಾರಿ ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು ಮತ್ತು ಕಾರ್ಮಿಕ ಘಟಕದ ಸಂಘಟನೆ ಕಟ್ಟುವಲ್ಲಿ ಉತ್ಸಾಹ ತುಂಬಿದ್ದು ಇದೇ ಉತ್ಸಾಹವನ್ನು ಹೋರಾಟ, ಸಮಾಜ ಸೇವೆ ಸೇರಿದ ವಿವಿಧ ಕಾರ್ಯಕ್ರಮಗಳನ್ನು ರಾಜ್ಯದಲ್ಲಿ ಶೋಷಿತ ಸಮುದಾಯಗಳ ಪರ ಹಾಗೂ ಎಲ್ಲಾ ಜಾತಿ ಜನಾಂಗದವರ ಪರವಾಗಿ ಕೆಲಸ ಮಾಡಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪೂಜಿಸುವಂತಹ ಕೆಲಸ ಮಾಡಬೇಕಾದರೆ ಅವರು ಹಮ್ಮಿಕೊಂಡಿರುವ ಯೋಜನೆಗಳನ್ನು ಪ್ರತಿಯೊಂದು ಗ್ರಾಮದಲ್ಲಿ ಜನಗಳಿಗೆ ತಲುಪಿಸುವಂತ ಕೆಲಸ ಮಾಡಬೇಕೆಂದು ತಿಳಿಸಿದರು.

ಅಹಿಂದ ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಿದ ಬಳ್ಳಾರಿ ಜಿಲ್ಲಾಧ್ಯಕ್ಷರಾದ ಎಂ.ಜಿ ಕನಕ ಅವರಿಗೆ ಹಾಗೂ ಅಹಿಂದ ಎಲ್ಲಾ ಪದಾಧಿಕಾರಿಗಳಿಗೆ ಹೃತೂರ್ವಕ ಧನ್ಯವಾದಗಳನ್ನು ತಿಳಿಸುತ್ತೇನೆ. ಅಹಿಂದ ಸಂಘದ ಎಲ್ಲಾ ಸದಸ್ಯರನ್ನು ಒಟ್ಟುಗೂಡಿಸಿ, ಸಂಘದ ಬೆಳವಣಿಗೆಗಾಗಿ ದುಡಿಯುತ್ತೇನೆ ಎಂದು ಚೇಳ್ಳಗುರ್ಕಿ ಹೆಚ್.ಆಂಜನೇಯ್ಯ ಅವರು ಹೇಳಿದರು.
ಬಳ್ಳಾರಿ ಜಿಲ್ಲಾ ಗೌರವಾಧ್ಯಕ್ಷರಾದ ಬಿ.ಮಾರುತಿ, ಪ್ರಧಾನ ಕಾರ್ಯದರ್ಶಿ ಉಮಾರ್ ಫಾರೂಕ್, ಜಿಲ್ಲಾ ಉಪಾಧ್ಯಕ್ಷರಾದ ಚೇಳ್ಳಗುರ್ಕೀ ನಾಗರಾಜ್, ಯುವ ಜಿಲ್ಲಾಧ್ಯಕ್ಷರಾದ ಕಿರಣ್ ಕುಮಾರ್, ಆಟೋ ಚಾಲಕರ ಸಂಘದ ಜಿಲ್ಲಾಧ್ಯಕ್ಷರಾದ ಆಪ್ತಮಿತ್ರ ಭಾಷಾ, ಜಿಲ್ಲಾ ಸಂಘಟನೆ ಕಾರ್ಯದರ್ಶಿಯಾದ ಸಿ.ಗಂಗಾಧರ್, ನಗರ ಉಪಾಧ್ಯಕ್ಷರಾದ ಮೆಹಬೂಬ್, ಬಾಷಾ, ನಗರ ಉಪಾಧ್ಯಕ್ಷರಾದ ಖಾಲಿದ್ ಬಾಷ ಹಾಗೂ ಯುವ ಘಟಕದ ಗ್ರಾಮಾಂತರ ಅಧ್ಯಕ್ಷರಾದ ವೈಫೈ ಶಿವು, ಬಾಷ, ಸುನೀಲ್, ಭೀಮ ಸೇರಿದಂತೆ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.