LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಧರ್ಮಸ್ಥಳ: ಬೃಹತ್ ಪಾದಯಾತ್ರೆ - ಮೀನಳ್ಳಿ ತಾಯಣ್ಣ

ಬಳ್ಳಾರಿ: ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಪ್ರಚಾರಗಳು ಧರ್ಮಭಾವನೆಗೆ ಧಕ್ಕೆ ತರುವಂತಿದ್ದು ಇದರ ವಿರುದ್ಧ ಇದೇ ಆ.31ರಂದು ನೇತ್ರಾವತಿ ನದಿ ತೀರದಿಂದ ಬೃಹತ್ ಪಾದಯಾತ್ರೆ ಹಮ್ಮಿಕೊಂಡಿರುವುದಾಗಿ ಜೆಡಿಎಸ್ ಜಿಲ್ಲಾಧ್ಯಕ್ಷ ಮೀನಳ್ಳಿ ತಾಯಣ್ಣ ಹೇಳಿದರು.

 

ಶುಕ್ರವಾರ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಧರ್ಮಸ್ಥಳದಲ್ಲಿ ನಡೆದಿವೆ ಎನ್ನಲಾದ ಘಟನೆಗಳ ಬಗ್ಗೆ ಸುಳ್ಳು ಆರೋಪಗಳನ್ನು ಆಧಾರವಾಗಿಟ್ಟುಕೊಂಡು ಸರ್ಕಾರ ಎಸ್ ಐ ಟಿ ರಚಿಸಿರುವುದು ಖಂಡನೀಯ. ಧರ್ಮಸ್ಥಳಕ್ಕೆ ಕಳಂಕ ತರುವ ಪ್ರಯತ್ನ ನಡೆಯುತ್ತಿದೆ. ಧರ್ಮಸ್ಥಳದಲ್ಲಿ ನೂರಾರು ಕೊಲೆಗಳಾಗಿವೆ ಎಂಬ ಸುಳ್ಳು ಹೇಳಿಕೆಗಳನ್ನು ನಂಬಿ ಸರ್ಕಾರ ಎಸ್ ಐ ಟಿ ರಚಿಸಿದೆ. ಇದು ಭಕ್ತರ ಭಾವನೆಗೆ ಅವಮಾನ. ಸರ್ಕಾರ ತಕ್ಷಣವೇ ಈ ಸುಳ್ಳು ಪ್ರಚಾರ ನಡೆಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.



ಜಾತ್ಯಾತೀತ ಜನತಾದಳದ ವತಿಯಿಂದ ಇದೇ ೩೧ರಂದು ರಾಜ್ಯದಾದ್ಯಂತ ನಿಖಿಲ್ ಕುಮಾರ ಸ್ವಾಮಿ ನೇತೃತ್ವದಲ್ಲಿ ಧರ್ಮಸ್ಥಳದ ನೇತ್ರಾವತಿಯಿಂದ ಬೃಹತ್ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯಿಂದ ನೂರಾರು ಜನ ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.

 

ಜೆಡಿಎಸ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಪುಷ್ಪ, ನಗರ ಘಟಕ ಅಧ್ಯಕ್ಷ ಮೀನಳ್ಳಿ ಹೊನ್ನೂರಪ್ಪ, ನಗರ ಯುವ ಘಟಕ ಅಧ್ಯಕ್ಷ ಕಿರಣ್ ಕುಮಾರ್ ಇನ್ನಿತರರು ಸುದ್ದಿಗೋಷ್ಠಿಯಲ್ಲಿದ್ದರು.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST