LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ದಾನಗಳಲ್ಲಿ ಶ್ರೇಷ್ಠ ದಾನವಾದ ರಕ್ತದಾನ ಮಾಡಿ : ಬಿ.ನಾಗೇಂದ್ರ

ಬಳ್ಳಾರಿ: ನಗರದ ಕೆ.ಆರ್.ಎಸ್ ಫಂಕ್ಷನ್ ಹಾಲ್ ನಲ್ಲಿ  ರಾಮರಾಜು ಫೌಂಡೆಶನ್ ವತಿಯಿಂದ ಬೃಹತ್ ರಕ್ತದಾನ ಶಿಬಿರ ಏರ್ಪಡಿಸಲಾಗಿದೆ. ಮಾಜಿ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಬಳ್ಳಾರಿ ಗ್ರಾಮಾಂತರ ಶಾಸಕರಾದ ಬಿ.ನಾಗೇಂದ್ರ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿದರು.



ನಂತರ ಮಾತನಾಡಿದ ಮಾಜಿ ಸಚಿವ ಬಿ.ನಾಗೇಂದ್ರ ಅವರು ದಾನಗಳಲ್ಲಿ ಅತೀ ಶ್ರೇಷ್ಠವಾದ ದಾನ ಎಂದರೆ ರಕ್ತದಾನ, ಇದು ಜೀವ ಉಳಿಸುವ ಒಂದು ಮಹತ್ತರ ಕಾರ್ಯ. ನೀವು ದಾನ ಮಾಡುವ ರಕ್ತದಿಂದ ಇನ್ನೊಬ್ಬರ ಜೀವ ಉಳಿಯುತ್ತದೆ. ಇದರಿಂದ ಆರೋಗ್ಯವಂತ ಭಾರತ ನಿರ್ಮಾಣವಾಗುತ್ತದೆ ಎಂದರು.

 18 ರಿಂದ 60 ವರ್ಷ ವಯಸ್ಸಿನ ಆರೋಗ್ಯವಂತ ವ್ಯಕ್ತಿ ರಕ್ತದಾನ ಮಾಡಬಹುದು. ರಕ್ತದಾನ ಮಾಡುವುದರಿಂದ ವ್ಯಕ್ತಿಯು ತನ್ನ ಆರೋಗ್ಯವನ್ನು ಪರೀಕ್ಷಿಸಿಕೊಳ್ಳಬಹುದು.



ರಕ್ತದಾನ ಮಾಡುವುದರಿಂದ ಮಾನಸಿಕ ನೆಮ್ಮದಿ ಸಿಗುತ್ತದೆ. ರಕ್ತದಾನ ಮಾಡುವಾಗ ಮತ್ತು ಮಾಡಿದ ನಂತರ ಗಮನಿಸಬೇಕಾದ ಕೆಲವೊಂದು ಮುನ್ನೆಚ್ಚರಿಕೆ ಕ್ರಮಗಳ ಕುರಿತು ತಿಳಿಹೇಳಿದರು.

ಬಳ್ಳಾರಿಯ ರಾಮರಾಜು ಫೌಂಡೆಶನ್ ವತಿಯಿಂದ ಮೂರನೇ ಬಾರಿ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು, ಫೌಂಡೇಶನ್ ಕಾರ್ಯ ಅಭಿನಂದನೀಯ ಎಂದು ಮಾಜಿ ಸಚಿವ ಬಿ.ನಾಗೇಂದ್ರ ಅವರು ಶ್ಲಾಘಿಸಿದರು.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST