ನಾಯಕನಹಟ್ಟಿ: ತನುಶ್ರೀ ಸಾಹಿತ್ಯ, ಸಾಂಸ್ಕೃತಿಕ ಕಲಾ ವೇದಿಕೆಯ ರಾಜ್ಯಾಧ್ಯಕ್ಷರಾದ ಶ್ರೀ ರಾಜು ಸೂಲೇನಹಳ್ಳಿ ರವರು ಇಂದು ಡಾ.ಪಾಲಯ್ಯಮಾರಮ್ಮನಹಳ್ಳಿ ಇವರನ್ನು ರಾಜ್ಯ ಕಾರ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದಾರೆ
ಇವರು ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲ್ಲೂಕಿನ ಕೊಂಡ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರಮ್ಮನಹಳ್ಳಿ ಗ್ರಾಮದಲ್ಲಿ ಹುಟ್ಟಿದ ಇವರು ಕನ್ನಡ ವಿಶ್ವವಿದ್ಯಾಲಯದಲ್ಲಿ ಡಾ.ಮಂಜುನಾಥ ಬೇವಿನಕಟ್ಟಿ ರವರ ಮಾರ್ಗದರ್ಶನದಲ್ಲಿ "ಚಿತ್ರದುರ್ಗ ಜಿಲ್ಲೆಯ ಬುಡಕಟ್ಟು ದೈವಗಳ ಸಾಂಸ್ಕೃತಿಕ ಅಧ್ಯಯನ" ಎಂಬ ವಿಷಯದಲ್ಲಿ ಪಿಎಚ್. ಡಿ ಪದವಿ ಪಡೆದಿದ್ದು ಸಾಹಿತ್ಯ ಕ್ಷೇತ್ರದಲ್ಲಿ ಅಪಾರವಾಗಿ ಗುರುತಿಸಿಕೊಂಡಿರುವ ಪರಿಣಾಮವಾಗಿ ಇಂದು ಇವರನ್ನು ತನುಶ್ರೀ ಸಾಹಿತ್ಯ, ಸಾಂಸ್ಕೃತಿಕ ಕಲಾ ವೇದಿಕೆ ರಾಜ್ಯಾಧ್ಯರಾದ ರಾಜುಸೂಲೆನಹಳ್ಳಿ ರವರು ರಾಜ್ಯ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.