LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶಿಕ್ಷಕರ ದಿನಾಚರಣೆ ಅಂಗವಾಗಿ ಶಿಕ್ಷಕರರಿಗೆ ಸನ್ಮಾನ ಸಮಾರಂಭ

ವಿಜಯನಗರ: ವಾಸವಿ ಸಮೂಹ ವಿದ್ಯಾಸಂಸ್ಥೆಯ, ವಾಸವಿ ಜ್ಞಾನಪೀಠ ಫಸ್ಟ್ ಗ್ರೇಡ್ ಕಾಲೇಜು ಸಭಾಂಗಣದಲ್ಲಿ  ಮಾಜಿ ರಾಷ್ಟ್ರಪತಿ ಸರ್ವಪಲ್ಲಿ ರಾಧಕೃಷ್ಣನ್ ರವರ ಹುಟ್ಟುಹಬ್ಬದ ಅಚರಣೆ ಮತ್ತು ಶಿಕ್ಷಕರ ದಿನಾಚರಣೆ ಹಾಗೂ  ಸಾಧಕ ಶಿಕ್ಷಕ, ಶಿಕ್ಷಕಿಯರಿಗೆ ಸನ್ಮಾನ ಸಮಾರಂಭ ಕಾರ್ಯಕ್ರಮವನ್ನು ವಾಸವಿ ಸಮೂಹ ಶಿಕ್ಷಣ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಡಿ.ಆರ್.ವಿಜಯಸಾರಥಿರವರು,   ಪ್ರಾಂಶುಪಾಲರಾದ ಶ್ರೀಮತಿ ಪದ್ಮಾ, ಡಾ.ರಂಗಸ್ವಾಮಿ, ರಚನ,ಸೌಭಾಗ್ಯ ರವರು ಚಾಲನೆ ನೀಡಿದರು.



ಇದೇ ಸಂದರ್ಭದಲ್ಲಿ ಕಾರ್ಯದರ್ಶಿ ಡಿ.ಆರ್.ವಿಜಯಸಾರಥಿ ರವರು  ಸರ್ವಪಲ್ಲಿ ರಾಧಕೃಷ್ಣನ್ ರವರು ರಾಷ್ಟ್ರಪತಿಗಳಾದರು ಶಿಕ್ಷಕ ವೃತಿಯನ್ನು ಮರೆಯಲ್ಲಿಲ, ಅವರ ಜನ್ಮದಿನಾಚರಣೆ ದಿನವನ್ನು ಶಿಕ್ಷಕರ ಮಹತ್ವ ತಿಳಿಯಲು ಶಿಕ್ಷಕರ ದಿನಾಚರಣೆ ಅಚರಿಸಲಾಗುತ್ತಿದೆ. ಶಿಕ್ಷಕ ಎಂದರೆ ವಿದ್ಯಾವಂತ ಸಮಾಜ ನಿರ್ಮಾಣ ಮಾಡುವ ವ್ಯಕ್ತಿತ್ವದವರು, ಗುರುಗಳನ್ನು ದೇವರೆಂದು ಭಾವಿಸುತ್ತಾರೆ. ಶಿಕ್ಷಕ ಇಲ್ಲವೆಂದರೆ ಸಮಾಜ ಎತ್ತ ಸಾಗುತ್ತದೆ ಎಂದು ಊಹಿಸಲು ಸಾಧ್ಯವಿಲ್ಲ. ಶಿಕ್ಷಕರು ಮಕ್ಕಳ ಶಿಕ್ಷಣಕ್ಕೆ ಅವರು ಸಮಾಜದಲ್ಲಿ ಡೊಡ್ಡ ವ್ಯಕ್ತಿಗಳು ಆಗಬೇಕು ಎಂದು ಶ್ರಮಪಡುತ್ತಾರೆ. ಮಕ್ಕಳು ವಿದ್ಯಾವಂತರಾಗಿ ದೇಶ ಕಟ್ಟುವ ಕೆಲಸ ಮಾಡಿದಾಗ ಸಮಾಜದ ಅಭವೃದ್ದಿಯಾಗುತ್ತದೆ ಎಂದು ಹೇಳಿದರು.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST