ಪಟ್ಟಣದ ನಮ್ಮ ಗ್ರೋಮರ್ ಕೇಂದ್ರದ ಎದುರು ರೈತರೊಂದಿಗೆ ಪ್ರತಿಭಟನೆ ಮಾಡಿ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರೈತರಿಗೆ ಸರಿಯಾಗಿ ಗೊಬ್ಬರ ದೊರೆಯುತ್ತಿಲ್ಲ. ತಾಲ್ಲೂಕಿನಲ್ಲಿ ಸೊಸೈಟಿ ಹಾಗೂ ಖಾಸಗಿ ರಸಗೊಬ್ಬರ ಮಾರಾಟ ಅಂಗಡಿಯವರು ನಿಗದಿತ ದರಕ್ಕಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿದ್ದಾರೆ ಎಂದು ದೂರಿದರು.

ಕೆಲ ಅಂಗಡಿಗಳಲ್ಲಿ ಗೊಬ್ಬರದ ದರಪಟ್ಟಿ ಹಾಕಿದ್ದರು ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿದ್ದಾರೆ. ಅಲ್ಲದೆ ಅಗತ್ಯವಿರುವ ಡಿಎಪಿ ಗೊಬ್ಬರದ ಜತೆಗೆ ಬೆರೆ ಗೊಬ್ಬರವನ್ನು ಕಡ್ಡಾಯವಾಗಿ ಖರೀದಿ ಮಾಡಲೇಬೇಕು ಇಲ್ಲದಿದ್ದರೆ ಡಿಎಪಿ ಗೊಬ್ಬರ ಕೊಡುವುದಿಲ್ಲ ಎಂದು ಖಡಾಖಂಡಿತವಾಗಿ ರೈತರಿಗೆ ಹೇಳುತ್ತಿದ್ದಾರೆ ಎಂದು ತಿಳಿಸಿದರು.
ರೈತರಿಗೆ ಸಮರ್ಪಕವಾಗಿ ಅಗತ್ಯವಾದ ಗೊಬ್ಬರ ನೀಡದಿದ್ದರೆ ಹಾಗೂ ಹೆಚ್ಚಿನ ದರಕ್ಕೆ ಮಾರಾಟ ಮಾಡಿದರೆ ಸಂಬಂಧಿಸಿದ ಕೃಷಿ ಇಲಾಖೆ ಎದುರು ಪ್ರತಿಭಟನೆ ಮಾಡುತ್ತೇವೆ ಎಂದು ಎಚ್ಚರಿಸಿದರು.
ಸುತ್ತಲಿನ ರೈತರು ಹಾಗೂ ರೈತ ಸಂಘದ ಮುಖಂಡರು ಭಾಗವಹಿಸಿದ್ದರು.