ಮರಿಯಮ್ಮನಹಳ್ಳಿ : ಹೊಸಪೇಟೆ ನಗರದ ಸಾಧ್ಯ ಟ್ರಸ್ಟ್ ಫಾರ್ ಸೋಶಿಯಲ್ ಡೆವಲಪ್ಮೆಂಟ್ (ರಿ) ಇದರ ಅಡಿಯಲ್ಲಿ ನಡೆಯುತ್ತಿರುವ ಬುದ್ಧಿಮಾಂದ್ಯ ವಿಕಲಚೇತನ ಮಕ್ಕಳ ತರಬೇತಿ ಕೇಂದ್ರದ ಅಭಿವೃದ್ಧಿಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸಮುದಾಯ ಅಭಿವೃದ್ಧಿ ಕಾರ್ಯಕ್ರಮದ ಅಡಿಯಲ್ಲಿ ಪರಮಪೂಜ್ಯ ಡಾ. ಡಿ ವೀರೇಂದ್ರ ಹೆಗ್ಗಡೆ ಅವರು ಮಂಜೂರು ಮಾಡಿರುವ 300000/- ಮೊತ್ತದ ಡಿ ಡಿ ಯನ್ನು ಸಂಸ್ಥೆಯ ಜಿಲ್ಲಾ ನಿರ್ದೇಶಕರಾದ ಶ್ರೀ ಸತೀಶ್ ಶೆಟ್ಟಿ ಅವರು ಸಾಧ್ಯ ಟ್ರಸ್ಟ್ ಫಾರ್ ಸೋಶಿಯಲ್ ಡೆವಲಪ್ಮೆಂಟ್ ನ ಅಧ್ಯಕ್ಷರಾದ ಶ್ರೀಮತಿ ಆರತಿ ಕೆ. ಟಿ ಅವರಿಗೆ ಹಸ್ತಾಂತರ ಮಾಡಿದರು.
ಈ ಸಂದರ್ಭದಲ್ಲಿ ತಾಲೂಕು ಯೋಜನಾಧಿಕಾರಿಯವರಾದ ಮಂಜುನಾಥ್ ನಾಯ್ಕ್, ಕೃಷಿ ಮೇಲ್ವಿಚಾರಕರಾದ ಚನ್ನಪ್ಪ, ಪ್ರಬಂಧಕರಾದ ಸುನಿಲ್ ಉಪಸ್ಥಿತರಿದ್ದರು