LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News Districts

ಪೆ. 4 ರಂದು ಉಚಿತ ಕ್ಯಾನ್ಸರ್ ತಪಾಸಣೆ ಮತ್ತು ಚಿಕಿತ್ಸೆ ಅಭಿಯಾನ

ಬೆಂಗಳೂರು: ಅಖಿಲ ಭಾರತ ಥೇರಾ ಪಂಥ ಮಹಿಳಾ ಮಂಡಳದ ಆಶ್ರ ಯದಲ್ಲಿ ಬೆಂಗಳೂರಿನ ಗಾಂಧಿನಗರದ ಶಾಖೆಯಿಂದ ವಿಶ್ವ ಕ್ಯಾನ್ಸರ್ ದಿನದ ಹಿನ್ನೆಲೆಯಲ್ಲಿ ಸರ್ವೈಕಲ್ ಕ್ಯಾನ್ಸರ್ ಉಚಿತ ತಪಾಸಣೆ ಮತ್ತು ಚಿಕಿತ್ಸಾ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಭಾರತ ಥೇರಾ ಪಂಥ ಮಹಿಳಾ ಮಂಡಳದ ಲಕ್ಷ್ಮೀ ಬೋಹ್ರಾ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನ ಸಾಮಾನ್ಯರಿಗೆ ಅನುಕೂಲವಾಗುವ ಈ ಕಾರ್ಯಕ್ರಮ ಮತ್ತಷ್ಟು ಜನರಿಗೆ ತಲುಪಿಸುವ ಉದ್ದೇಶದಿಂದ ಫೆ.4 ರಂದು ಈ ಶಿಬಿರ ಆಯೋಜಿಸಲಾಗಿದೆ. 21 ರಿಂದ 65 ವಯೋಮಿತಿಯವರಿಗೆ ಈ ಅಭಿಯಾನ ನಡೆಯುತ್ತಿದ್ದು, ಬೆಂಗಳೂರು ನಗರದ ಜನತೆ ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.



ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಶಿಬಿರ ಉದ್ಘಾಟಿಸಲಿದ್ದು, ಚಿತ್ರನಟಿ ಸಂಜನಾ ಗುರ್ಲಾನಿ ಈ ಕಾರ್ಯಕ್ರಮದ ರಾಯಭಾರಿಯಾಗಿದ್ದಾರೆ. ಒಟ್ಟು 20 ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ, ನೋಂದಣಿಗೆ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರು ನಗರದಲ್ಲಿ ಉದ್ಯೋಗಸ್ಥ ಮಹಿಳೆರಲ್ಲಿ ಈ ಸಮಸ್ಯೆ ಹೆಚ್ಚಾಗಿದ್ದು, ಅವರಿಗಾಗಿ ಈ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಸರಳ, ಸುರಕ್ಷಿತ ಮತ್ತು ನೋವು ರಹಿತವಾದ ಪರೀಕ್ಷೆ ಇದಾಗಿದ್ದು, ಸ್ಥಳದಲ್ಲಿಯೇ ತಪಾಸಣೆ ನಡೆಯಲಿದೆ. ಇತ್ತೀಚೆಗೆ ಸರ್ವೈಕಲ್ ಕ್ಯಾನ್ಸರ್ ಹೆಚ್ಚಾಗುತ್ತಿದೆ. ಇದನ್ನು ಮನಗಂಡು ಕೇಂದ್ರ ಸರ್ಕಾರ ಇದಕ್ಕೆ ವಿಶೇಷ ಲಸಿಕಾ ಅಭಿಯಾನವನ್ನು ಸಹ ಆರಂಭಿಸಿದೆ. ರೋಗವನ್ನು ತಡೆಗಟ್ಟುವ ಜೊತೆಗೆ ಸಮಸ್ಯೆ ಇರುವವರಿಗೆ ಚಿಕಿತ್ಸೆ ದೊರಕಿಸಿಕೊಡಲಾಗುವುದು ಎಂದರು.

ಸುದ್ದಿಗೋಷ್ಠಿಯಲ್ಲಿ ಕಾರ್ಯದರ್ಶಿ ವಿಜೇತ ಜೈನ್, ಸಂಚಾಲಕರಾದ ಇಂದು ಕಿನ್ವೇಸರ, ನೀತಾ ಗೋಡಿಯಾ ಮತ್ತಿತರರು ಉಪಸ್ಥಿತರಿದ್ದರು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ