ಇಲ್ಲಿನ ಬಂಡಿಮೋಟ್ ಪ್ರದೇಶದ ಎಪಿಎಂಸಿ ವೃತ್ತದಲ್ಲಿರುವ ಉಜ್ಜನಿ ಶಾಲೆಯಲ್ಲಿ ಫಾದರ್ಸ್ ಕೇರ್ ಫೌಂಡೇಷನ್ ಮತ್ತು ಅಮ್ಮ ಟ್ರಸ್ಟ್ ವತಿಯಿಂದ ಏರ್ಪಡಿಸಲಾಗಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಾವು ಆರೋಗ್ಯ ಲೆಕ್ಕಿಸದೇ ದುಡಿಯುತ್ತೇವೆ. ಆದರೆ ಅರೋಗ್ಯ ಕೈಕೊಟ್ಟಾಗ ದುಡಿದ ಹಣ ಒಯ್ದು ಸುರಿಯುತ್ತೇವೆ. ಅಧಿಕ ರಕ್ತದೊತ್ತಡ, ಸಕ್ಕರೆ ಕಾಯಿಲೆ, ಹೃದಯಾಘಾತದಂತಹ ರೋಗಗಳು ಹೆಚ್ಚುತ್ತಿವೆ. ಆರೋಗ್ಯದತ್ತ ಪ್ರತಿಯೊಬ್ಬರೂ ಕಾಳಜಿ ವಹಿಸಬೇಕು ಎಂದರು.
ಕೆಲಸದ ಒತ್ತಡದ ನಡುವೆಯೂ ನಮ್ಮ ಆರೋಗ್ಯದ ಬಗ್ಗೆ ಗಮನಹರಿಸಬೇಕು. ದೈಹಿಕ ಹಾಗೂ ಮಾನಸಿಕ ಆರೋಗ್ಯದಿಂದರೆ ದೈನಂದಿನ ಚಟುವಟಿಕೆಗಳಲ್ಲಿ ಉಲ್ಲಾಸದಿಂದ ತೊಡಗಿಸಿಕೊಳ್ಳಲು ಸಾಧ್ಯ. ಯೋಗ, ಧ್ಯಾನ, ಪ್ರಾಣಾಯಾಮ ರೂಢಿಸಿಕೊಳ್ಳಬೇಕು. ಮಹಿಳೆಯರು ಕುಟುಂಬ ನಿರ್ವಹಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಕೆಲವು ಸಂದರ್ಭದಲ್ಲಿ ತಮ್ಮ ಆರೋಗ್ಯವನ್ನು ಲೆಕ್ಕಿಸದೆ ಕುಟುಂಬಕ್ಕಾಗಿ ಶ್ರಮಿಸುತ್ತಾರೆ. ಹಾಗಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಂಡು ಉಂಟಾಗಬಹುದಾದ ಅಪಾಯದಿಂದ ದೂರ ಇರಬೇಕೆಂದು ಶ್ರೀರಾಮುಲು ಹೇಳಿದರು.

ಶಿಬಿರದಲ್ಲಿ ಬಿಪಿ, ಸಕ್ಕರೆ ಕಾಯಿಲೆ, ಕಿಡ್ನಿ, ಹೃದಯ ಸಂಬಂಧಿ ಸೇರಿದಂತೆ ಹಲವು ರೀತಿಯ ತಪಾಸಣೆಗಳನ್ನು ಉಚಿತವಾಗಿ ನಡೆಸಿ ಸಾರ್ವಜನಿಕರಿಗೆ ಮಹಾ ಉಪಕಾರವನ್ನು ಈ ಅಮ್ಮ ಟ್ರಸ್ಟ್ ನವರು ಮಾಡಿದ್ದಾರೆ ಎಂದು ಹೇಳಿದರು.
ಈ ವೇಳೆ ಮುಖಂಡರಾದ ಬಂಬಂ ದಾದ, ಕಣೇಕಲ್ಲು ಮಹೆಬೂಬ್ ಸಾಬ್, ಬಂಡಿಮೋಟ್ ವಿ.ಗಾದಿಲಿಂಗ, ಟ್ರಂಕ್ ನೂರ್, ಅಂಜುಂ ಭಾಷ, ತಿಮ್ಮಪ್ಪ, ಗುಜರಿ ಅಜೀಜ್, ಗುಗ್ಗರಹಟ್ಟಿ ರಾಮಾಂಜನಿ, ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.