LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News Districts

ವದ್ದಟ್ಟಿ ಗ್ರಾಮದಲ್ಲಿ ಜಿಪಂ ಸಿಇಒ ಭೇಟಿ

ಬಳ್ಳಾರಿ : ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರಿಸ್ ಸುಮೈರ್ ಅವರು, ಬುಧವಾರ ಕುರುಗೋಡು ತಾಲೂಕಿನ ಯರಂಗಳಿಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವದ್ದಟ್ಟಿ ಗ್ರಾಮಕ್ಕೆ ದಿಢೀರ್ ಭೇಟಿ ನೀಡಿ, ಉದ್ಯೋಗ ಖಾತ್ರಿ (ವಿಬಿ-ಜಿ ರಾಮ್ -ಜಿ) ಯೋಜನೆಯಡಿ ನಡೆಯುತ್ತಿರುವ ವಿವಿಧ ಕಾಮಗಾರಿಗಳನ್ನು ನೇರವಾಗಿ ಪರಿಶೀಲಿಸಿದರು.

                ಸ್ಥಳದಲ್ಲಿದ್ದ ಕೂಲಿಕಾರರೊಂದಿಗೆ ನೇರ ಸಂವಾದ ನಡೆಸಿದ ಸಿಇಒ ಅವರು, ಕೆಲಸದ ಸಮಯ, ಹಾಜರಾತಿ ಹಾಗೂ ಯೋಜನೆಯಡಿ ದಿನವೊಂದಕ್ಕೆ ದೊರೆಯುತ್ತಿರುವ ಕೂಲಿ ಮೊತ್ತದ ವಿವರಗಳನ್ನು ಕೂಲಿಕಾರರಿಂದಲೇ ಪಡೆದುಕೊಂಡರು.

ವೈಯಕ್ತಿಕ ಕಾಮಗಾರಿಗಳಿಗೆ ಹೆಚ್ಚಿನ ಒತ್ತು ನೀಡಲು ಸೂಚನೆ:

                ಸ್ಥಳದಲ್ಲಿದ್ದ ಕಾಯಕ ಬಂಧುಗಳಿಗೆ ನಿರ್ದೇಶನ ನೀಡಿದ ಅವರು, ಹೊಸದಾಗಿ ಕೃಷಿಯೇತರ ಚಟುವಟಿಕೆಗಳಿಗೆ ಅನುಗುಣವಾಗಿ ಸೂಕ್ತ ಕಾಮಗಾರಿಗಳ ಪಟ್ಟಿಯನ್ನು ತಕ್ಷಣ ಸಿದ್ಧಪಡಿಸಬೇಕು ಎಂದು ತಿಳಿಸಿದರು.

                ಪ್ರತಿಯೊಂದು ಕುಟುಂಬಕ್ಕೂ ಆರ್ಥಿಕ ಭದ್ರತೆ ಸಿಗುವಂತಾಗಲು ವೈಯಕ್ತಿಕ ಕಾಮಗಾರಿಗಳಾದ ದನದ ಕೊಟ್ಟಿಗೆ ಹಾಗೂ ಕುರಿ/ಕೋಳಿ ಶೆಡ್ಡುಗಳು, ಕೃಷಿ ಹೊಂಡ ಹಾಗೂ ಸೋಕ್ ಪಿಟ್ (ಇಂಗು ಗುಂಡಿ), ಎರೆಹುಳು ಗೊಬ್ಬರ ತೊಟ್ಟಿ ಮತ್ತು ಅಜೋಲ ಘಟಕಗಳ ನಿರ್ಮಾಣಕ್ಕೆ ಹೆಚ್ಚಿನ ಆಧ್ಯತೆ ನೀಡಿ ಕೆಲಸ ಪ್ರಾರಂಭಿಸಲು ಸೂಚಿಸಿದರು.

news_1784741131_5_283.webp

 

ಪದವೀಧರ ಕೂಲಿಕಾರರೊಂದಿಗೆ ವಿಶೇಷ ಸಂವಾದ:

                ಪರಿಶೀಲನೆ ವೇಳೆ ಯೋಜನೆಯಡಿಯಲ್ಲಿ ಕೂಲಿ ಕೆಲಸ ನಿರ್ವಹಿಸುತ್ತಿದ್ದ ಬಿ.. ಪದವೀಧರ ವಿದ್ಯಾರ್ಥಿಗಳೊಂದಿಗೆ ಜಿಪ್ಮಾ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರಿಸ್ ಸುಮೈರ್ ಅವರು ವಿಶೇಷ ಸಂವಾದ ನಡೆಸಿ, ಅವರ ಶ್ರಮದಾನವನ್ನು ಶ್ಲಾಘಿಸಿದರು.

                ಸಂದರ್ಭದಲ್ಲಿ ಕುರುಗೋಡು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಪಂಪಾಪತಿ ಹಿರೇಮಠ, ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಸಹಾಯಕ ನಿರ್ದೇಶಕ ಶ್ರೀರಾಮ ರೆಡ್ಡಿ, ಪಂಚಾಯತ್ ರಾಜ್ ಇಲಾಖೆಯ ಸಹಾಯಕ ನಿರ್ದೇಶಕ ರೇಣುಕಾ ಸ್ವಾಮಿ, ಯರಂಗಳಿಗಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪರಶುರಾಮ್,  ತಾಂತ್ರಿಕ ಸಂಯೋಜಕ ಮಲ್ಲಿಕಾರ್ಜುನ್, ..ಸಿ ಸಂಯೋಜಕ ಚಂದ್ರಶೇಖರ್, ತಾಂತ್ರಿಕ ಸಹಾಯಕಿ ಅರುಣಜ್ಯೋತಿ ಮತ್ತು ಬಿಎಫ್ಟಿ ಆಗಲೂರಪ್ಪ ಸೇರಿದಂತೆ ಗ್ರಾಮ ಕಾಯಕ ಮಿತ್ರರು, ಕಾಯಕ ಬಂಧುಗಳು ಹಾಗೂ ಗ್ರಾಮ ಪಂಚಾಯತಿ ಸಿಬ್ಬಂದಿ, ಸಾರ್ವಜನಿಕರು ಉಪಸ್ಥಿತರಿದ್ದರು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ