LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News Districts

ಅಂತರಾಷ್ಟ್ರೀಯ ರಾಷ್ಟ್ರೀಯ ಕರಾಟೆ ಚಾಂಪಿಯನ್ಶಿಪ್ನಲ್ಲಿ ಟ್ರಡಿಷನಲ್ ಶೊಟೋಕಾನ್ ಅಕಾಡೆಮಿಗೆ ಭರ್ಜರಿ ಸಾಧನೆ

ಬಳ್ಳಾರಿ: ಉತ್ತರಾಖಂಡದ ಹರಿದ್ವಾರದಲ್ಲಿ ನಡೆದ “ಸೆಷನ್–4 ಸೂಪರ್ ಗೋಲ್ಡ್ ಕರಾಟೆ ಲೀಗ್” ಅಂತರಾಷ್ಟ್ರೀಯ ರಾಷ್ಟ್ರೀಯ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಟ್ರಡಿಷನಲ್ ಶೊಟೋಕಾನ್ ಅಕಾಡೆಮಿಯ ವಿದ್ಯಾರ್ಥಿಗಳು ಕಾಟಾ ಮತ್ತು ಕುಮಿತೆ ವಿಭಾಗಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಹಲವು ಪದಕಗಳನ್ನು ಗೆದ್ದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.

ಮೇ 9 ಮತ್ತು 10ರಂದು ನಡೆದ ಎರಡು ದಿನಗಳ ಚಾಂಪಿಯನ್‌ಶಿಪ್‌ನಲ್ಲಿ ದೇಶದ ವಿವಿಧ ರಾಜ್ಯಗಳ ಜೊತೆಗೆ ಅಂತರಾಷ್ಟ್ರೀಯ ಮಟ್ಟದ ಸ್ಪರ್ಧಿಗಳು ಭಾಗವಹಿಸಿದ್ದರು. ಕಠಿಣ ಸ್ಪರ್ಧೆಯ ನಡುವೆಯೂ ಟ್ರಡಿಷನಲ್ ಶೊಟೋಕಾನ್ ಅಕಾಡೆಮಿಯ ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಸ್ಪರ್ಧಿಸಿ ಚಿನ್ನ, ಬೆಳ್ಳಿ ಹಾಗೂ ಕಂಚಿನ ಪದಕಗಳನ್ನು ತಮ್ಮದಾಗಿಸಿಕೊಂಡರು.

ಸ್ಪರ್ಧೆಯಲ್ಲಿ ತೇಜೇಶ್ ಕಾಟಾ ವಿಭಾಗದಲ್ಲಿ ದ್ವಿತೀಯ ಸ್ಥಾನ ಹಾಗೂ ಕುಮಿತೆ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದರು. ಮಣಿಚರಣ್ ಕಾಟಾದಲ್ಲಿ ಪ್ರಥಮ ಹಾಗೂ ಕುಮಿತೆಯಲ್ಲಿ ದ್ವಿತೀಯ ಸ್ಥಾನ ಗಳಿಸಿದರು. ಮಧುಸೂದನ್ ರೆಡ್ಡಿ ಕಾಟಾ ಮತ್ತು ಕುಮಿತೆ ಎರಡೂ ವಿಭಾಗಗಳಲ್ಲಿ ದ್ವಿತೀಯ ಸ್ಥಾನ ಪಡೆದು ಗಮನ ಸೆಳೆದರು.

ಮಹೇಂದ್ರ ಪ್ರಸಾದ್ ಕಾಟಾ ಹಾಗೂ ಕುಮಿತೆ ಎರಡೂ ವಿಭಾಗಗಳಲ್ಲಿ ಪ್ರಥಮ ಸ್ಥಾನ ಪಡೆದು ಡಬಲ್ ಚಾಂಪಿಯನ್ ಆಗಿ ಹೊರಹೊಮ್ಮಿದರು. ಟಿ.ಎಸ್. ಸಾಯಿ ತೇಜ ಕಾಟಾದಲ್ಲಿ ಪ್ರಥಮ ಹಾಗೂ ಕುಮಿತೆಯಲ್ಲಿ ದ್ವಿತೀಯ ಸ್ಥಾನ ಪಡೆದರು. ಭುವನ್ ತೇಜ್ ಎಚ್ ಕಾಟಾ ಮತ್ತು ಕುಮಿತೆ ವಿಭಾಗಗಳಲ್ಲಿ ದ್ವಿತೀಯ ಸ್ಥಾನ ಗಳಿಸಿದರು.

ಚಾರಿಕಾ ಕಾಟಾ ಹಾಗೂ ಕುಮಿತೆ ಎರಡೂ ವಿಭಾಗಗಳಲ್ಲಿ ದ್ವಿತೀಯ ಸ್ಥಾನ ಪಡೆದು ಸಾಧನೆ ಮಾಡಿದರು. ಕೃತಿಕಾ ಕಾಟಾದಲ್ಲಿ ಪ್ರಥಮ ಮತ್ತು ಕುಮಿತೆಯಲ್ಲಿ ದ್ವಿತೀಯ ಸ್ಥಾನ ಪಡೆದರು. ನಿರ್ಭಾಯಿ ಎಚ್. ನಾಯ್ಡು ಕಾಟಾ ಮತ್ತು ಕುಮಿತೆ ಎರಡೂ ವಿಭಾಗಗಳಲ್ಲಿ ಪ್ರಥಮ ಸ್ಥಾನ ಗಳಿಸಿ ಪ್ರಶಂಸೆಗೆ ಪಾತ್ರರಾದರು.

ಶಾನ್ವಿ ಕಾಟಾದಲ್ಲಿ ಪ್ರಥಮ ಹಾಗೂ ಕುಮಿತೆಯಲ್ಲಿ ದ್ವಿತೀಯ ಸ್ಥಾನ ಪಡೆದರು. ಅಬಿನಾಶ್ ಪಾಲ್ ಕಾಟಾ ಮತ್ತು ಕುಮಿತೆ ಎರಡೂ ವಿಭಾಗಗಳಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡರು. ಹರ್ಷವರ್ಧನ್ ಕಾಟಾದಲ್ಲಿ ದ್ವಿತೀಯ ಹಾಗೂ ಕುಮಿತೆಯಲ್ಲಿ ತೃತೀಯ ಸ್ಥಾನ ಗಳಿಸಿದರು.

ಸಾಯಿ ಜ್ಯೋತಿ ಕಾಟಾದಲ್ಲಿ ಪ್ರಥಮ ಮತ್ತು ಕುಮಿತೆಯಲ್ಲಿ ದ್ವಿತೀಯ ಸ್ಥಾನ ಪಡೆದರು. ನಿಖಿಲ್ ಕ್ರಿಶ್ ಕಾಟಾದಲ್ಲಿ ಪ್ರಥಮ ಹಾಗೂ ಕುಮಿತೆಯಲ್ಲಿ ತೃತೀಯ ಸ್ಥಾನ ಪಡೆದು ಮೆಚ್ಚುಗೆಗೆ ಪಾತ್ರರಾದರು. ದೇವಾಂಶ್ ಯೆಲ್ಲಾ ಕಾಟಾ ಮತ್ತು ಕುಮಿತೆ ಎರಡೂ ವಿಭಾಗಗಳಲ್ಲಿ ಪ್ರಥಮ ಸ್ಥಾನ ಪಡೆದು ಅಕಾಡೆಮಿಯ ಸಾಧನೆಗೆ ಮತ್ತಷ್ಟು ಮೆರಗು ತಂದರು. ಗೌತಮ್ ಕಾಟಾದಲ್ಲಿ ದ್ವಿತೀಯ ಹಾಗೂ ಕುಮಿತೆಯಲ್ಲಿ ಪ್ರಥಮ ಸ್ಥಾನ ಪಡೆದರೆ, ತೇಜೇಶ್ ವಿ.ಪಿ ಕಾಟಾದಲ್ಲಿ ದ್ವಿತೀಯ ಮತ್ತು ಕುಮಿತೆಯಲ್ಲಿ ತೃತೀಯ ಸ್ಥಾನ ಪಡೆದರು.

ವಿದ್ಯಾರ್ಥಿಗಳ ಈ ಸಾಧನೆಗೆ ಟ್ರಡಿಷನಲ್ ಶೊಟೋಕಾನ್ ಅಕಾಡೆಮಿಯ ಸಂಸ್ಥಾಪಕ ಅಧ್ಯಕ್ಷರಾದ ಕಟ್ಟೇಸ್ವಾಮಿ ಸಂತಸ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದರು. ವಿದ್ಯಾರ್ಥಿಗಳ ಶಿಸ್ತು, ನಿರಂತರ ಅಭ್ಯಾಸ ಮತ್ತು ಪರಿಶ್ರಮದಿಂದಲೇ ಈ ಸಾಧನೆ ಸಾಧ್ಯವಾಗಿದೆ ಎಂದು ಹೇಳಿದರು.

ತರಬೇತುದಾರರಾದ ಹುಲುಗಣ್ಣ, ಪ್ರಸಾದ್ ಜಡೇಶ್, ಹನುಮಂತ ಹಾಗೂ ತಾಂತ್ರಿಕ ನಿರ್ದೇಶಕರಾದ ಸುಭಾಷ್ ಮುತ್ಕೂರ್ ವಿದ್ಯಾರ್ಥಿಗಳಿಗೆ ಶುಭಾಶಯ ಕೋರಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಲ್ಲಿ ಸಾಧನೆ ಮಾಡುವ ವಿಶ್ವಾಸ ವ್ಯಕ್ತಪಡಿಸಿದರು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ