LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಐಸಿಎಫ್ಎಐ ನಲ್ಲಿ ಕಾನೂನು ಸೇವೆಗಳ ಕ್ಲಿನಿಕ್ ಉದ್ಘಾಟನೆ

ಬೆಂಗಳೂರು: ಕಾನೂನು ವಿದ್ಯಾರ್ಥಿಗಳಿಗೆ ಸಾಮಾಜಿಕ ಜವಾಬ್ದಾರಿ ಇರಬೇಕು. ಸಮಾಜದ ಸ್ವಾಸ್ತ್ಯ ಕಾಪಾಡುವ ಕೆಲಸದಲ್ಲಿ ನಿರತರಾಗಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶ್ರೀಶೈಲ್ ಭೀಮಶೇನ್ ಬಗಾಡಿ ಹೇಳಿದ್ದಾರೆ.

 

ನಗರದ ಐಸಿಎಫ್ಎಐ ಕಾನೂನು ಶಾಲೆ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದಲ್ಲಿ ಐಸಿಎಫ್ಎಐ ಕಾನೂನು ಶಾಲೆಯ ಲೀಗಲ್ ಏಡ್ ಕ್ಲಿನಿಕ್ನಲ್ಲಿ ಕಾನೂನು ಸೇವೆಗಳ ಕ್ಲಿನಿಕ್ ಅನ್ನು ಉದ್ಘಾಟಿಸಿ, ಪ್ರಸಕ್ತ ಸಾಲಿನ ಬಿ.ಬಿ.., ಎಲ್.ಎಲ್.ಬಿ. ವಿದ್ಯಾರ್ಥಿಗಳದೀಕ್ಷಾರಂಭಶೈಕ್ಷಣಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಕಾನೂನು ನೆರವಿನ ಮಹತ್ವದ ಬಗ್ಗೆ ತಿಳಿದುಕೊಳ್ಳಬೇಕು. ಪ್ರತಿಯೊಬ್ಬರಿಗೂ ಸಮಾನ ನ್ಯಾಯ ದೊರೆಯುವಂತಹ ವ್ಯವಸ್ಥೆ ರೂಪಿಸಲು ಶ್ರಮಿಸಬೇಕು. ನ್ಯಾಯದಾನ ಅತ್ಯಂತ ಮಹತ್ದ ಜವಾಬ್ದಾರಿಯಾಗಿದೆ ಎಂದರು.

 news_1785258786_1_285.webp

 

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯರಾದ ವೆಂಕಟೇಶ್ ಮಾತನಾಡಿ, ವಿದ್ಯಾರ್ಥಿಗಳು ಈಗಿನಿಂದಲೇ ಸಾಮಾನ್ಯ ಕಾನೂನುಗಳ ಬಗ್ಗೆ ತಿಳಿದುಕೊಳ್ಳಬೇಕು. ಸಮಾಜದ ಜೊತೆ ಒಡನಾಟವಿದ್ದರೆ ವ್ಯಾಜ್ಯಗಳನ್ನು ಬಹುಬೇಗ ಇತ್ಯರ್ಥಪಡಿಸುವ ಚಾಕಚಕ್ಯತೆ ಬರುತ್ತದೆ ಎಂದರು.

ಕಾನೂನು ಸೇವೆಗಳ ಕ್ಲಿನಿಕ್ ಉದ್ಘಾಟನೆಯೊಂದಿಗೆ ಕಾನೂನು ಅರಿವು, ಉಚಿತ ಕಾನೂನು ನೆರವು ಹಾಗೂ ಸಮಾಜಸೇವಾ ಚಟುವಟಿಕೆಗಳಿಗೆ ಅಧಿಕೃತ ಚಾಲನೆ ದೊರೆಯಿತು. ವಿದ್ಯಾರ್ಥಿ ಸಂಚಾಲಕರಾದ ಎಸ್.ವಿ. ವರ್ಷಾ ನೇತೃತ್ವದ ತಂಡದ ಸಂಯೋಜಕರಾಗಿ ಕಾರ್ಯನಿರ್ವಹಿಸಿತು. 

 

ಐಎಫ್ಎಚ್ ಕುಲಪತಿ ಪ್ರೊ. ಮುದ್ದು ವಿನಯ್, ಐಸಿಎಫ್ಎಐ ಕಾನೂನು ಶಾಲೆ ಹಾಗೂ ಬೆಂಗಳೂರು ಕ್ಯಾಂಪಸ್ ವಿಭಾಗದ ಮುಖ್ಯಸ್ಥರಾದ ಪ್ರೊ. ಡಾ. ವಿನಯ್ ಜೋಶಿ,, ಐಎಫ್ಎಚ್ ಡಾ. ರಾಜಶ್ರೀ ಪಾಟೀಲ್ ಮತ್ತಿತರರು ಉಪಸ್ಥಿತರಿದ್ದರು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ