ಕ್ಯಾಮ್ಸ್ ಕರ್ನಾಟಕ ದಕ್ಷಿಣ ವಲಯ-1,2 ಮತ್ತು ಗ್ರೀನ್ಸ್ ಇನೋವೇಟರ್ ನೇತೃತ್ವದಲ್ಲಿ ವಿಶ್ವ ಮಹಿಳಾ ದಿನಾಚರಣೆಯನ್ನು ಆವಲಹಳ್ಳಿಯ ಕುವೆಂಪು ರಂಗ ಮಂದಿರದಲ್ಲಿ ದಕ್ಷಿಣ ವಲಯ-2ರ ಕ್ಷೇತ್ರ ಶಿಕ್ಷಣಾಧಿಕಾರಿ ಗಿರಿಜಮ್ಮ ಉದ್ಘಾಟಿಸಿದರು.
ನಂತರ ಮಾತನಾಡಿದ ಗಿರಿಜಮ್ಮ, ಹೆಣ್ಣು ಮಕ್ಕಳು ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು. ಇದಕ್ಕಾಗಿ ಸೂಕ್ತ ಹಣಕಾಸು ಶಿಕ್ಷಣ ಪಡೆಯಬೇಕು ಎಂದು ಕರೆ ನೀಡಿದರು.

ಡಾ. ನಳಿನಿ ಮಾತನಾಡಿ ಹೆಣ್ಣು ಮಕ್ಕಳು ಆರೋಗ್ಯ ರಕ್ಷಣೆಗೆ ಹೆಚ್ಚು ಆದ್ಯತೆ ನೀಡಬೇಕು. ಗುಣಮಟ್ಟದ ಆಹಾರ, ವಿಹಾರಕ್ಕೆ ಒತ್ತು ನೀಡಬೇಕು ಎಂದು ಕಿವಿ ಮಾತು ಹೇಳಿದರು.
ಕೆನರಾ ಬ್ಯಾಂಕ್ ಮ್ಯಾನೇಜರ್ ಲಾವಣ್ಯ ಅವರು, ಹಣಕಾಸು ಉಳಿತಾಯ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.
ಗಿನ್ನಿಸ್ ವಿಶ್ವ ದಾಖಲೆಯ ರಂಗಲಕ್ಷ್ಮಿ ಶ್ರೀನಿವಾಸರವರ ನಗೆಯೋಗ ನೃತ್ಯದಲ್ಲಿ ಮಹಿಳೆಯರು ಅತ್ಯಂತ ಆನಂದದಿಂದ ಪಾಲ್ಗೊಂಡು ಸಂಭ್ರಮಿಸಿದರು.