LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News Districts

ಪೊಲೀಸ್ ದೂರುಗಳ ಪ್ರಾಧಿಕಾರದ ಆದೇಶ ತೀರ್ಪುಗಳನ್ನು ಕನ್ನಡದಲ್ಲಿ ಹೊರಡಿಸಿ

ಬೆಂಗಳೂರು:  ರಾಜ್ಯದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳ ಕರ್ತವ್ಯಲೋಪ ಮತ್ತು ಗಂಭೀರ ದುರ್ನಡತೆ, ಅಧಿಕಾರ ದುರ್ಬಳಕೆ ಸೇರಿದಂತೆ ಪೊಲೀಸ್ ದೌರ್ಜನ್ಯ ವಿರುದ್ದ ಸಲ್ಲಿಸುವ ದೂರುಗಳ ಆದೇಶಗಳನ್ನು ಕನ್ನಡದಲ್ಲೇ ಹೊರಡಿಸುವಂತೆ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಅಧ್ಯಕ್ಷರಾದ ಜಸ್ಟೀಸ್ ಎನ್.ಕೆ.ಸುಧೀಂದ್ರ ರಾವ್ ರವರಿಗೆ ಪ್ರಾಧಿಕಾರದ ಸದಸ್ಯರಾದ ಮೋಹನ್ ಕುಮಾರ್ ದಾನಪ್ಪನವರು ಪತ್ರದ ಮೂಲಕ ಮನವಿ ಸಲ್ಲಿಸಿದ್ದಾರೆ!



ರಾಜ್ಯದಿಂದ ದೂರುಸಲ್ಲಿಸುವ ದೂರುದಾರರು ಬಹುತೇಕ ಕೆಳ ಮತ್ತು ಮಧ್ಯಮ ವರ್ಗದವರಾಗಿದ್ದು ಬಹುತೇಕ ಜನರು ಪೂರಕ ಶಿಕ್ಷಣ ಪಡೆದವರಾಗಿದ್ದು ಗ್ರಾಮೀಣ ಭಾಗದವರಾಗಿರುತ್ತಾರೆ, ಕೆಲವರು ದೂರು ಬರೆಯಲು ಶಕ್ತರಾದರೆ ಇನ್ನು ಕೆಲವರು ಶಿಕ್ಷಣವಂತರ ಹಾಗೂ ವಕೀಲರ ಸಹಾಯದಿಂದ ದೂರು ಬರೆಯಿಸಿ ಪ್ರಾಧಿಕಾರದಲ್ಲಿ ಸಲ್ಲಿಸುತ್ತಿದ್ದು, ವಿಚಾರಣೆ ಕೈಗೊಂಡ ಸಂದರ್ಭದಲ್ಲಿ ಆಂಗ್ಲ ಭಾಷೆಯಲ್ಲಿ ಆದೇಶ ಘೋಷಣೆ ಮತ್ತು ದೂರಿನ ಅಂತಿಮ ಆದೇಶ/ನಡಾವಳಿಗಳನ್ನು ಆಂಗ್ಲಭಾಷೆಯಲ್ಲಿ ಹೊರಡಿಸುತ್ತಿರುವುದರಿಂದ ದೂರುದಾರರಿಗೆ ಅರ್ಥವಾಗದೇ ನಡಾವಳಿಯಲ್ಲಿನ ವಿಷಯ ತಿಳಿಯಲು ಕಷ್ಟಕರವಾಗಿರುತ್ತದಲ್ಲದೆ  ಮತ್ತೊಬ್ಬರನ್ನು ಆಶ್ರಯಿಸಬೇಕಾದ ಅನಿವಾರ್ಯತೆಯಿದ್ದು ಸಾರ್ವಜನಿಕ ಹಿತಾದೃಷ್ಟಿಯಿಂದ ಪ್ರಾಧಿಕಾರದಲ್ಲಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮದಂತೆ ಪ್ರಸ್ತುತ ಬಾಕಿ ಇರುವ ಎಲ್ಲಾ ಪ್ರಕರಣಗಳ ವಿಚಾರಣೆಯನ್ನು ಆದೇಶ/ತೀರ್ಪುಗಳನ್ನು ಕನ್ನಡದಲ್ಲೇ ಹೊರಡಿಸುಂತೆ ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯರಾದ ಮೋಹನ್ ಕುಮಾರ್ ದಾನಪ್ಪನವರು ಒತ್ತಾಯಿಸಿದ್ದಾರೆ

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ