LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಎಂ.ಬಿ.ಪಾಟೀಲ್ ತಪ್ಪಿಸಿಕೊಳ್ಳುಲು ಪರದಾಡುತ್ತಿದ್ದಾರೆ: ಹೇಮಲತಾ ನಾಯಕ

ಕೊಪ್ಪಳ: 20ನೇ ದಿನದ ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಹಾಗೂ ಪ.ಹಿ.ವೇದಿಕೆ ಇದರ ಜಂಟಿ ಕ್ರಿಯಾ ವೇದಿಕೆಯಿಂದ ನಡೆಯುತ್ತಿರುವ ಅನಿರ್ದಿಷ್ಟ ಧರಣಿಗೆ ಡಾ. ಬಿ. ಆರ್. ಅಂಬೇಡ್ಕರ್ ಕಟ್ಟಡ ಮತ್ತು ಬಾರ್ ಬೆಂಡಿಂಗ್ ಇತರೆ ನಿರ್ಮಾಣಕಾರರ ಸಂಘದ ಕಟ್ಟಡ ಮೇಸ್ತ್ರಿಗಳು ಅಶೋಕ ವೃತ್ತದಿಂದ ಧರಣಿ ಸ್ಥಳಕ್ಕೆ ಕಾರ್ಖಾನೆ ವಿಸ್ತರಣೆ ವಿರೋಧಿಸಿ ಘೋಷಣೆ ಕೂಗುತ್ತಾ ಆಗಮಿಸಿ ಧರಣಿ ಹೋರಾಟ ನಡೆಸಿದರು.

ಬಿಜೆಪಿ ಎಂ.ಎಲ್.ಸಿ ಹೇಮಲತಾ ನಾಯಕ ಅವರು ಮಾತನಾಡಿ, ನಾನು ಸದನದಲ್ಲಿ ಬಲ್ಡೋಟಾ ವಿಸ್ತರಣೆಯ ನಿಲುಗಡೆ, ಬಸಾಪುರ ಕೆರೆ ರಕ್ಷಣೆ ಮಾಡಲು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರ ದುಂಬಾಲು ಬಿದ್ದಿದ್ದೇನೆ. ನನಗೆ ಚರ್ಚೆ ಮಾಡಲು ಸರಕಾರ ಅವಕಾಶ ಕೊಡುತ್ತಿಲ್ಲ. ಮುಖ್ಯಮಂತ್ರಿಗಳಲ್ಲಿ ಸರ್ವ ಪಕ್ಷದ ನಿಯೋಗದಿಂದ ಭೇಟಿ ಮಾಡಿದಾಗ ಇಷ್ಟು ದಿನ ಈ ಸಮಸ್ಯೆ ಉಲ್ಬಣಗೊಳ್ಳಲು ಬಿಟ್ಟು ಈಗ ಏನು ಮಾಡುತ್ತೀರಿ ಎಂದಾಗ ಯಾರೂ ಮಾತಾಡಲಿಲ್ಲ. ಜಿಲ್ಲಾ ಮಂತ್ರಿ ತಂಗಡಗಿಯವರು ಮುಖ್ಯಮಂತ್ರಿಗಳಿಗೆ ಶ್ರೀ ಗವಿಸಿದ್ದೇಶ್ವರರು ಹೋರಾಟಕ್ಕೆ ಧುಮಿಕಿದ್ದಾರೆ ಎಂದು ಮನವರಿಕೆ ಮಾಡಿದಾಗ ಜಿಲ್ಲಾಧಿಕಾರಿಗೆ ತಕ್ಷಣ ಕರೆ ಮಾಡಿ ತಾತ್ಕಾಲಿಕವಾಗಿ ವಿಸ್ತರಣಾ ಚಟುವಟಿಕೆ ನಿಲ್ಲಿಸಲು ಮೌಖಿಕ ಆದೇಶ ಮಾಡಿದ್ದು ಬಿಟ್ಟರೆ, ಇದುವರೆಗೆ ಲಿಖಿತ ಆದೇಶ ಮಾಡಿಲ್ಲ. ನಾನು ಇದನ್ನು ಚಳಿಗಾಲದ ಅಧಿವೇಶನದಲ್ಲಿ ಚರ್ಚೆಗೆ ತರುವಂತೆ ಹೋರಾಡುತ್ತೇನೆ ಇದರಲ್ಲಿ ಇಡೀ ಕೊಪ್ಪಳ ನಗರ, ಭಾಗ್ಯನಗರ ಮತ್ತು ೨೦ಕ್ಕೂ ಹೆಚ್ಚು ಬಾಧಿತ ಹಳ್ಳಿಗಳ ಆರೋಗ್ಯ ರಕ್ಷಣೆ ಹಿತಕ್ಕಾಗಿ ಏನಾದರೂ ಆಗಲಿ ಹೋರಾಡುತ್ತೇನೆ ಎಂದರು.   ಬಿಜೆಪಿ ಮುಖಂಡ ಡಾ.ಬಸವರಾಜ ಕ್ಯಾವಟರ್ ಅವರು ರಾಜ್ಯ ಸರ್ಕಾರ ಅನುಮತಿಯನ್ನು ಕೇಂದ್ರ ಸರ್ಕಾರ ಕೊಟ್ಟಿದೆ ಎಂದು ಮುಖ್ಯಮಂತ್ರಿಗಳೇ ಹೇಳುತ್ತಿರುವುದ ಪಲಾಯನ ದಾರಿ ಹಿಡಿದಂತೆ ಕಾಣುತ್ತಿದೆ. ಇಲ್ಲಿನ ಜನರ ಆರೋಗ್ಯ ಹಿತಾಸಕ್ತಿ ಬಲಿಕೊಟ್ಟರೆ ಯಾರು ತಾನೆ ಸಹಿಸಿಕೊಳ್ಳಲು ಸಾಧ್ಯ ಎಂದು ಪ್ರಶ್ನಿಸಿದರು.  ನಾವು ಪಕ್ಷದ ಉನ್ನತ ಹಂತದಲ್ಲಿ ನಾಯಕರುಗಳಿಗೆ ಮನವೊಲಿಸಿ ಬೆಂಬಲ ಪಡೆದು ಬೀದಿಗಿಳಿದು ಶಕ್ತಿ ಪ್ರದರ್ಶನ ಮಾಡುತ್ತೇವೆ ಎಂದರು.

ಜೆಡಿಎಸ್ ನಾಯಕ ರಾಜು ನಾಯಕ, ಬಿಜೆಪಿ ಎಸ್.ಸಿ. ಘಟಕ ಅಧ್ಯಕ್ಷ ಗಣೇಶ ಹೊರತಟ್ನಾಳ ಹೋರಾಟ ಬೆಂಬಲಿಸಿ ಮಾತನಾಡಿದರು. ಬಿಜೆಪಿ ಮುಖಂಡರಾದ ಮಹೇಶ ವಿ ಅಂಗಡಿ, ರಮೇಶ ಮಲ್ಲಪ್ಪ ಕವಲೂರು, ಪೀರಾ ಹುಸೇನ ಹೊಸಳ್ಳಿ, ಪಿ.ವಿ. ಪರೂತಗೌಡ್ರ, ನೀಲಕಂಠಯ್ಯ ಹಿರೇಮಠ, ಕೀರ್ತಿ ಪಾಟೀಲ್, ಗೀತಾ ಮುತ್ತಾಳ, ವಾಣಿಶ್ರೀ ಎಚ್. ಎಮ್. ಡಾ. ಗೀತಾ ಮಠದ ಧರಣಿಗೆ ಬೆಂಬಲಿಸಿದರು. ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಮುಂದೆ ಇನ್ನಷ್ಟು ವಿಭಿನ್ನವಾಗಿ ಹೋರಾಟ ಮಾಡುವ ಯೋಜನೆ ಮಾಡಿರುವ ಸಂಘಟಕರು, ಸಾರ್ವಜನಿಕರ ಸಹಭಾಗಿತ್ವಕ್ಕೆ ಮನವಿ ಮಾಡಿದ್ದಾರೆ.

ಇದೇ ವೇಳೆ ಖ್ಯಾತ ಸಿನಿಮಾ ನಿರ್ದೇಶಕ ಮಹಾದೇವ ಹಡಪದ ಧಾರವಾಡ, ಚಿಂತಕ ಜಿ.ಕೆ.ಗೋವಿಂದರಾವ ಅವರ ಮೊಮ್ಮಗಳು ಎ. ಅನನ್ಯ, ಸಾಹಿತಿ ಮಲ್ಲಿಕಾರ್ಜುನ ಹಿರೇಮಠ, ನೈಸರ್ಗಿಕ ಕೃಷಿಕರಾದ ದೇವೇಂದ್ರಪ್ಪ ಬಳೂಟಗಿ, ಧರಣಿ ಸ್ಥಳಕ್ಕೆ ಬಂದು ಬೆಂಬಲಿಸಿ ಮಾತನಾಡಿದರು. ಬಾಲ ನ್ಯಾಯಮಂಡಳಿ ಸದಸ್ಯರು ನೇತ್ರಾ ಬಿ. ಪಾಟೀಲ್, ಕವಿತಾ ಬ. ಒಂಟಿ, ಗವಿಸಿದ್ದಯ್ಯ ಹಳ್ಳಿಕೇರಿಮಠ, ರವಿ ಕಾಂತನವರ, ಮೌಲಾ ಹುಸೇನ್, ರಮೇಶ ಎಚ್.ಎಚ್. ಭಾಗವಹಿಸಿದರು.

 

ಹೋರಾಟದಲ್ಲಿ ಅಲ್ಲಮಪ್ರಭು ಬೆಟ್ಟದೂರು, ಕೆ.ಬಿ. ಗೋನಾಳ, ಮಂಜುನಾಥ ಜಿ. ಗೊಂಡಬಾಳ, ಮಹಾದೇವಪ್ಪ ಮಾವಿನಮಡು, ವೆಂಕಟೇಶ, ದುರುಗೇಶ, ನಾಗರಾಜ್ ಚಾಳೀಸ್, ಮಂಜುನಾಥಗೌಡ ಯತ್ನಟ್ಟಿ, ಮಖಬೂಲ್ ರಾಯಚೂರು, ಬಸವರಾಜ್ ನರೇಗಲ್, ಮೂಕಪ್ಪ ಮೆಸ್ತ್ರಿ ಬಸಾಪುರ, ಡಿ.ಎಂ. ಬಡಿಗೇರ್, ಎಸ್.ಬಿ. ರಾಜೂರ, ಮುದಕಪ್ಪ ಹೊಸಮನಿ, ಬಸವರಾಜ್ ಶೀಲವಂತರ, ಕಾಶಪ್ಪ ಚಲವಾದಿ ಇದ್ದರು.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST