ಡಾ.ಸಿದ್ರಾಮ ದಾದಾರಾವ್ ವಾಘಮಾರೆ ಅವರಿಗೆ ಕೆಪಿಸಿಸಿ ಹಿಂದುಳಿದ ವರ್ಗಗಳ ರಾಜ್ಯ ಘಟಕದ ಉಪಾಧ್ಯಕ್ಷರನ್ನಾಗಿ ನಿಯೋಜಿಸಿರುವ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನೇತೃತ್ವದ ಸರ್ಕಾರ ಸುಲಲಿತವಾಗಿ ಮುನ್ನಡೆಯುತ್ತಿದೆ. ಪಂಚ ಗ್ಯಾರಂಟಿ ಯೋಜನೆಗಳು ಕೋಟ್ಯಾಂತರ ಜನರ ಬಾಳಲ್ಲಿ ಬೆಳಕು ನೀಡುತ್ತಿವೆ. ಹಿಂದುಳಿದ ಸಮುದಾಯದವರು ತಮ್ಮ ಮಕ್ಕಳಿಗೆ ಹೆಚ್ಚಿನ ಶಿಕ್ಷಣ ಒದಗಿಸಬೇಕು. ಸಮುದಾಯಗಳನ್ನು ಸಂಘಟಿಸಿ ಮುಖ್ಯ ವಾಹಿನಿಗೆ ಬರಬೇಕು. ಈ ದಿಸೆಯಲ್ಲಿ ಕಾಂಗ್ರೆಸ್ ಪಕ್ಷ ಎಲ್ಲ ರೀತಿಯಿಂದ ನೆರವಾಗಲಿದ್ದು ಡಾ.ಸಿದ್ರಾಮ ವಾಘಮಾರೆ ಅವರು ಈ ದಿಸೆಯಲ್ಲಿ ಕಾರ್ಯಪ್ರವೃತ್ತರಾಗಲಿದ್ದಾರೆ ಎನ್ನುವ ವಿಶ್ವಾಸವಿದೆ ಎಂದು ಮಧು ಬಂಗಾರಪ್ಪ ತಿಳಿಸಿದರು.

ಬೆಂಗಳೂರಿನ ಸದಾಶಿವ ನಗರದಲ್ಲಿರುವ ನಿವಾಸದಲ್ಲಿ ಮಧುಬಂಗಾರಪ್ಪನವರನ್ನು ಭೇಟಿಯಾಗಿ ಅಭಿನಂದಿಸಿದ ಡಾ.ಸಿದ್ರಾಮ ವಾಘಮಾರೆ ಅವರಿಗೆ ಮಧು ಬಂಗಾರಪ್ಪ ಈ ಸಲಹೆ ನೀಡಿದರು. ಕಳೆದ ನಾಲ್ಕು ದಶಕಗಳಿಂದ ಡಾ.ಸಿದ್ರಾಮ ವಾಘಮಾರೆ ಅವರು ಪಕ್ಷಕ್ಕಾಗಿ ಶ್ರಮಿಸುತ್ತಿದ್ದಾರೆ. ಸಚಿವರಾದ ಈಶ್ವರ್ ಖಂಡ್ರೆ, ರಹೀಂ ಖಾನ್, ಪ್ರಿಯಾಂಕ್ ಖರ್ಗೆ, ಮಾಜಿ ಸಚಿವ ರಾಜಶೇಖರ ಪಾಟೀಲ್ ಸೇರಿದಂತೆ ಹಲವಾರು ನಾಯಕರೊಂದಿಗೆ ಒಡನಾಟ ಇರಿಸಿಕೊಂಡಿದ್ದಾರೆ. ಎಐಸಿಸಿ ವರಿಷ್ಠರು ಮತ್ತು ಕೆಪಿಸಿಸಿ ನಾಯಕರೊಂದಿಗೆ ಗುರುತಿಸಿಕೊಂಡಿರುವ ಇವರು ರಾಜ್ಯಮಟ್ಟದ ಜಾನಪದ ಕಲಾವಿದರು ಕೂಡ. ಇವರು ಪಕ್ಷದ ಸಂಘಟನೆಗೆ ಮತ್ತು ಪಕ್ಷದ ನಿಷ್ಠೆ ಗಮನಿಸಿ ವರಿಷ್ಠರು ಈ ಸ್ಥಾನಮಾನ ನೀಡಿದ್ದಾರೆ. ಕಲ್ಯಾಣ ಕರ್ನಾಟಕವಲ್ಲದೇ ನಾಡಿನಾದ್ಯಂತ ಸಂಚರಿಸಿ ಪಕ್ಷದ ತತ್ವ, ನಿಷ್ಠೆಗಳು ಮತ್ತು ಸರ್ಕಾರದ ಯೋಜನೆಗಳನ್ನು ಜನರಿಗೆ ಮನವರಿಕೆ ಮಾಡಿ ಕೊಡುವ ಇಂಗಿತವನ್ನು ಡಾ.ಸಿದ್ರಾಮ ವಾಘಮಾರೆ ವ್ಯಕ್ತಪಡಿಸಿದ್ದಾರೆ.