ಬಳ್ಳಾರಿ : ಕನ್ನಡ ಸಾಹಿತ್ಯ ಪರಿಷತ್ತು ನೀಡುವ 2024 ನೇ ಸಾಲಿನ ‘ಪಂಪಮ್ಮ ಶರಣೇಗೌಡ ವಿರುಪಾಪುರ ದತ್ತಿ ‘ ಪ್ರಶಸ್ತಿಗೆ ದಸ್ತಗೀರಸಾಬ್ ದಿನ್ನಿ ಅವರ ’ಮಧು ಬಟ್ಟಲಿನ ಗುಟುಕು ‘ ಗಜಲ್ ಸಂಕಲನ ಆಯ್ಕೆಯಾಗಿದೆ.
ದಿನ್ನಿಯವರು ಸರಳಾದೇವಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ಸಹ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಸಾಹಿತಿ ಕೆ.ಮರುಳಸಿದ್ದಪ್ಪ ಅವರ ಅಧ್ಯಕ್ಷತೆಯ ಸಮಿತಿ ವಿವಿಧ ಪ್ರಕಾರಗಳಲ್ಲಿ ಕೃತಿಗಳನ್ನು ಆಯ್ಕೆ ಮಾಡಿದೆ. ಶೀಘ್ರದಲ್ಲೇ ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಪರಿಷತ್ತಿನ ಆಡಳಿತಾಧಿಕಾರಿ ಕೆ.ಎಂ. ಗಾಯತ್ರಿ ತಿಳಿಸಿದ್ದಾರೆ.