LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News Districts

ಪ್ರತಿದಿನ ತಪ್ಪದೇ ಶಾಲೆಗೆ ಬರಬೇಕು: ಸಚಿವ ಎಸ್.ಮಧುಬಂಗಾರಪ್ಪ

ಬಳ್ಳಾರಿ : ಮಕ್ಕಳು ದಿನಾಲೂ ಶಾಲೆಗೆ ಬರಬೇಕು. ಯಾವುದೇ ಕಾರಣಕ್ಕೂ ಶಾಲೆಗೆ ತಪ್ಪಿಸಬಾರದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಮಧು ಬಂಗಾರಪ್ಪ ಅವರು ಹೇಳಿದರು.

ನಗರದ ಪಟೇಲ್ ನಗರ ಬಡಾವಣೆಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, 7 ತರಗತಿಯ ಮಕ್ಕಳೊಂದಿಗೆ ಸಂವಾದ ನಡೆಸಿ ಅವರು ಮಾತನಾಡಿದರು.


ಮನೆಯಲ್ಲಿ ಶಾಲೆಗೆ ಹೋಗಲು ಅಡ್ಡಿಪಡಿಸಿದರೆ, ನಾನು ತಪ್ಪದೇ ಶಾಲೆಗೆ ಹೋಗುತ್ತೇನೆ ಎಂದು ಹೇಳಬೇಕು. ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ಪಡೆಯಬೇಕು. ಆರೋಗ್ಯದಿಂದಿರಬೇಕು. ಶಿಕ್ಷಣ ಪಡೆದುಕೊಂಡು ಉನ್ನತ ವ್ಯಕ್ತಿಗಳಾಗಿ ಹೊರಹೊಮ್ಮಬೇಕು ಎಂದು ಸಚಿವರು ಆಶಿಸಿದರು.


ಸಂವಿಧಾನ ಪೀಠಿಕೆ ಪ್ರಸ್ತುತಪಡಿಸಿದ ರಿತಿಕಾ:
ವಿದ್ಯಾರ್ಥಿಗಳಿಗೆ ಸಂವಿಧಾನ ಪೀಠಿಕೆ ಯಾರೂ ಹೇಳುತ್ತೀರಾ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಎಸ್.ಮಧು ಬಂಗಾರಪ್ಪ ಅವರು ಕೇಳಿದಾಗ, ಶಾಲೆಯ ಐದನೇ ತರಗತಿ ವಿದ್ಯಾರ್ಥಿನಿ ರಿತಿಕಾ ಅವರು ಸಂವಿಧಾನ ಪೀಠಿಕೆಯನ್ನು ವಿಸ್ತಾರವಾಗಿ ವಾಚನ ಮಾಡಿದರು.
ಮಕ್ಕಳೊಂದಿಗೆ ಊಟ ಸವಿದ ಸಚಿವರು:
ಶಾಲೆಯ ವಿವಿಧ ಕೊಠಡಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಚಿವರು, ಬಳಿಕ ಮಕ್ಕಳೊಂದಿಗೆ ಮಧ್ಯಾಹ್ನದ ಬಿಸಿಯೂಟ ಸವಿದರು. ಊಟದಲ್ಲಿ ಅನ್ನ, ಸಾಂಬಾರು ಜೊತೆಗೆ ಉಪ್ಪಿನಕಾಯಿ ಮತ್ತು ಮೊಟ್ಟೆ ನೀಡಲಾಗಿತ್ತು. ಇದೇ ವೇಳೆ ಊಟದ ರುಚಿಯ ಬಗ್ಗೆ ಮಕ್ಕಳ ಅಭಿಪ್ರಾಯ ಪಡೆದುಕೊಂಡರು.


ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೈರ್, ಕಲಬುರಗಿ ವಿಭಾಗದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಪರ ಆಯುಕ್ತ ಡಾ.ಆಕಾಶ್ ಶಂಕರ್, ಡಿಡಿಪಿಐ ಬಿ.ಉಮಾದೇವಿ, ವಿಷಯ ಪರಿವೀಕ್ಷಕಿ ವೇದಾವತಿ, ಶಾಲೆಯ ಮುಖ್ಯಗುರುಗಳಾದ ಜಯಶ್ರೀ ಸೇರಿದಂತೆ ಬಿಇಒ, ಎಸ್‌ಡಿಎಂಸಿ ಅಧ್ಯಕ್ಷರು, ಶಾಲಾ ಶಿಕ್ಷಕರು, ಶಾಲಾ ಶಿಕ್ಷಕರು ಹಾಗೂ ಇತರರು ಇದ್ದರು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ