LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News Districts

ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದ ಶಾಸಕ ನಾರಾ ಭರತ್ ರೆಡ್ಡಿ

ಬಳ್ಳಾರಿ : ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿಯವರು ಶನಿವಾರ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಿವಿಧ ವಾರ್ಡುಗಳಲ್ಲಿ ವಿವಿಧ ಕಾಮಗಾರಿಗಳಿಗ ಭೂಮಿ ಪೂಜೆ ನೆರವೇರಿಸಿದರು.

 

ಬಳ್ಳಾರಿ ನಗರದ 23ನೇ ವಾರ್ಡಿನ ಮಹಾನಂದಿಕೊಟ್ಟಂ ಸರ್ಕಾರಿ ಪ್ರಾಥಮಿಕ ಶಾಲೆಯನ್ನು ಅಂದಾಜು 1.32 ಕೋಟಿ ರೂ.ಗಳ ವೆಚ್ಚದಲ್ಲಿ ಮರು ನಿರ್ಮಾಣ ಮಾಡಲಾಗಿದ್ದು, 5 ನೂತನ ಕೊಠಡಿಗಳನ್ನು ಉದ್ಘಾಟಿಸಿದರು. 5 ಕೊಠಡಿಗಳು, ಒಂದು ಅಡುಗೆ ಕೋಣೆ, ಶೌಚಾಲಯ ಹಾಗೂ ಕಾಂಪೌಂಡ್, ಪೇವರ್ಸ್ ಅಳವಡಿಕೆ ಕಾಮಗಾರಿಗಳನ್ನು ಪೂರ್ಣಗೊಳಿಸಿ ಸುಸಜ್ಜಿತವಾಗಿ ನಿರ್ಮಿಸಲಾಗಿದೆ. ಉದ್ಘಾಟನಾ ಸಮಾರಂಭದಲ್ಲಿ ಮೇಯರ್ ಗಾದೆಪ್ಪ, ಆಯುಕ್ತರಾದ ಮಂಜುನಾಥ್, ವಾರ್ಡ್ ಪ್ರಮುಖರಾದ ಸೋಮಶೇಖರ್, ಗೌತಮ್, ಬ್ರಹ್ಮಯ್ಯ, ಹುಲಿಗೆಪ್ಪ, ಕೆಂಚಪ್ಪ, ಮಾಜಿ ಮೇಯರ್ ಎಂ.ರಾಜೇಶ್ವರಿ, ಕಾಂಗ್ರೆಸ್ ಮುಖಂಡರಾದ ಸುಬ್ಬರಾಯುಡು, ಪರಶುರಾಮುಡು, ಥಿಯೇಟರ್ ಶಿವು ಮತ್ತಿತರರು ಹಾಜರಿದ್ದರು.

 

ನಗರದ 35ನೇ ವಾರ್ಡ್ ವ್ಯಾಪ್ತಿಯ ರಾಜೇಶ್ವರಿ ನಗರದಲ್ಲಿ ಅಂದಾಜು ವೆಚ್ಚ 20 ಲಕ್ಷ ರೂ.ಗಳಲ್ಲಿ ಮೇದಾರ ಸಮದಾಯ ಭವನದ ನಿರ್ಮಾಣ ಕಾಮಗಾರಿ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭ ವಾರ್ಡಿನ ಸದಸ್ಯ ಮಿಂಚು ಶ್ರೀನಿವಾಸ, ಪಾಲಿಕೆಯ ಸದಸ್ಯರಾದ ಕುಬೇರಾ, ಮಾಜಿ ಮೇಯರ್ ರಾಜೇಶ್ವರಿ, ಕಾಂಗ್ರೆಸ್ ಮುಖಂಡರಾದ ಎಲ್.ಮಾರೆಣ್ಣ, ಶೇಖಣ್ಣ, ರಾಮಾಂಜನೇಯ, ದಾನಪ್ಪ, ಬಾನಕ್ಕ, ಪ್ರಸಾದ್, ಮಂಜು, ಶ್ಯಾಮ್, ದೇಗಲಪಾಡು ನಾರಾಯಣ ಸೇರಿದಂತೆ ಹಲವರು ಹಾಜರಿದ್ದರು.



ವಾರ್ಡ್ ಸಂಖ್ಯೆ 3ರ ಭತ್ರಿ ಪ್ರದೇಶದಲ್ಲಿ 20 ಲಕ್ಷ ರೂ.ಗಳ ವೆಚ್ಚದಲ್ಲಿ ಅಂಗನವಾಡಿ ಕೇಂದ್ರ ನಂ.01ರ ನಿರ್ಮಾಣ ಕಾಮಗಾರಿಗೆ ಶಾಸಕ ನಾರಾ ಭರತ್ ರೆಡ್ಡಿಯವರು ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.

 

ಈ ಸಂದರ್ಭ ವಾರ್ಡಿನ ಸದಸ್ಯರೂ ಮಾಜಿ ಮೇಯರ್ ಎಂ.ರಾಜೇಶ್ವರಿ, ಕಾಂಗ್ರೆಸ್ ಮುಖಂಡರಾದ ವಿಷ್ಣು ಬೋಯಪಾಟಿ, ಪರಶುರಾಮುಡು, ಸುಬ್ಬರಾಯುಡು, ಭತ್ರಿ ಮಂಜು, ಸೋಮಪ್ಪ ಮತ್ತಿತರರು ಹಾಜರಿದ್ದರು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ