LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News Districts

ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದ ಶಾಸಕ ನಾರಾ ಭರತ್ ರೆಡ್ಡಿ

ಬಳ್ಳಾರಿ :  ಬಳ್ಳಾರಿ ನಗರ ಕ್ಷೇತ್ರದ ಶಾಸಕ ನಾರಾ ಭರತ್ ರೆಡ್ಡಿ ಮಂಗಳವಾರ ವಿವಿಧ ವಾರ್ಡುಗಳಲ್ಲಿ ಹಲವು ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.

ಬಳ್ಳಾರಿ ನಗರದ ವಾರ್ಡ್ ಸಂಖ್ಯೆ 21ರ ಹರಿಪ್ರಿಯ ನಗರದಲ್ಲಿ 5 ಕೋಟಿ ರೂ.ಗಳ ಅನುದಾನದ ವೆಚ್ಚದಲ್ಲಿ ಬೀದಿ ದೀಪ, ಚರಂಡಿ, ಒಳ ಚರಂಡಿ, ಪೇವರ್ಸ್ ಅಳವಡಿಕೆ ಕಾಮಗಾರಿಗೆ ಇಂದು ಭೂಮಿ ಪೂಜೆ ನೆರವೇರಿಸಿದರು.



ಈ ಸಂದರ್ಭ ಮಾಜಿ ಮೇಯರ್ ರಾಜೇಶ್ವರಿ, ಚಾನಾಳ್ ಶೇಖರ್, ಶಿವಶಂಕರಗೌಡ, ಯಾಳ್ಪಿ ಪಂಪನಗೌಡ, ತಿಮ್ಮನಗೌಡ, ನಾಗೇಶ್ವರ ರಾವ್, ರವಿ, ಶಶಿಧರ ಮೇಟಿ, ಗುತ್ತಿಗನೂರು ವಿರೂಪಾಕ್ಷಗೌಡ, ಅಂಗಡಿ ಪಂಪಾಪತಿ, ಮೇಟಿ ದಿವಾಕರಗೌಡ, ಶ್ಯಾಮ್, ಯುಧಿಷ್ಠಿರ, ವಾಸು ರೆಡ್ಡಿ ಮತ್ತಿತರರು ಹಾಜರಿದ್ದರು.

ತದನಂತರ ಇದೇ ವಾರ್ಡಿನ ಸಿದ್ಧಾರ್ಥ ನಗರದಲ್ಲಿ 50 ಲಕ್ಷ ರೂ.ಗಳ ಅನುದಾನದ ವೆಚ್ಚದಲ್ಲಿ ಲಿಂಕ್ ರಸ್ತೆಗಳ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.

ಈ ಸಂದರ್ಭ ಮಾಜಿ ಮೇಯರ್ ರಾಜೇಶ್ವರಿ, ಸಿರಿಗೆರೆ ಪನ್ನರಾಜ್, ಹಿರೇಮಠ್, ಪ್ರಭಾಕರ್ ರೆಡ್ಡಿ, ಚಾನಾಳ್ ಶೇಖರ್, ವಿಜಯಲಕ್ಷ್ಮೀ, ಹಗರಿ ಹೊನ್ನೂರಪ್ಪ, ಪರಶುರಾಮುಡು, ಹೊನ್ನಪ್ಪ, ವಾಸು ರೆಡ್ಡಿ ಮತ್ತಿತರರು ಹಾಜರಿದ್ದರು.



ಬಳಿಕ ವಾರ್ಡ್ ಸಂಖ್ಯೆ 24ರ ಬ್ರಹ್ಮಯ್ಯ ಕಾಲೋನಿಯಲ್ಲಿ 50 ಲಕ್ಷ ರೂ.ಗಳ ಅನುದಾನದ ವೆಚ್ಚದಲ್ಲಿ ಲಿಂಕ್ ರಸ್ತೆಗಳ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.

ಈ ವೇಳೆ ನಾರಾ ವಿನಯ್ ರೆಡ್ಡಿ, ವೀರೇಂದ್ರ, ಪೋಲಕ್ (ಹನಮಂತ) ರೆಡ್ಡಿ,  ಚಾನಾಳ್ ಶೇಖರ್, ಹಗರಿ ಹೊನ್ನೂರಪ್ಪ, ಪರಶುರಾಮುಡು, ಹೊನ್ನಪ್ಪ, ವಾಸು ರೆಡ್ಡಿ ಮತ್ತಿತರರು ಹಾಜರಿದ್ದರು.

ತದನಂತರ ಬಳ್ಳಾರಿ ನಗರದ ವಾರ್ಡ್ ಸಂಖ್ಯೆ 34ರ ವಿದ್ಯಾನಗರ 7ನೇ ಅಡ್ಡ ರಸ್ತೆಯ ಬಳಿ 81.93 ಲಕ್ಷ ರೂ.ಗಳ ಅನುದಾನದ ವೆಚ್ಚದಲ್ಲಿ ಲಿಂಕ್ ರಸ್ತೆಗಳ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.

ಈ ಸಂದರ್ಭ ಪಾಲಿಕೆಯ ಸದಸ್ಯರು ಮಾಜಿ ಮೇಯರ್ ಎಂ.ರಾಜೇಶ್ವರಿ, ಕಾಂಗ್ರೆಸ್ ಮುಖಂಡರಾದ ಸುಬ್ಬರಾಯುಡು, ವಿಷ್ಣು ಬೋಯಪಾಟಿ, ಮಲ್ಲಿ, ಯೋಗಾನಂದ ರೆಡ್ಡಿ, ಹಗರಿ ಹೊನ್ನೂರಪ್ಪ, ಪರಶುರಾಮುಡು, ಹೊನ್ನಪ್ಪ, ಯೋಗೇಂದ್ರ ಕಟ್ಟ, ಇಟ್ಟಾವರಂ ಮಲ್ಲಿಕಾರ್ಜುನ, ಲಾಲ್ ಮೋಹನ್, ಭತ್ರಿ ಮಂಜು, ರಘು ಕಟ್ಟ, ಹರ್ಷ, ಸತೀಶ್ ಮತ್ತಿತರರು ಹಾಜರಿದ್ದರು.



ಬಳಿಕ ವಾರ್ಡ್ ಸಂಖ್ಯೆ 04ರ ಗುಗ್ಗರಹಟ್ಟಿಯ ಮುಖ್ಯ ರಸ್ತೆ 1.50 ಕೋಟಿ ರೂ.ಗಳ ವೆಚ್ಚದಲ್ಲಿ ಪಾಂಡುರಂಗ ಗುಡಿಯಿಂದ ಹೆಚ್ಎಲ್ ಕಾಲುವೆ ಹೊನ್ನಳ್ಳಿವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.

ಈ ಸಂದರ್ಭ ಕಾಂಗ್ರೆಸ್ ಮುಖಂಡರಾದ ಡಿ.ಸೂರಿ, ಸುಬ್ಬರಾಯುಡು, ಗುಗ್ಗರಹಟ್ಟಿ ಅನ್ವರ್, ಎಂಎನ್ಟಿ ಮಾಬು, ಸಿ.ಡಿ. ಹೊನ್ನೂರಸ್ವಾಮಿ,  ಪರಶುರಾಮುಡು, ಹೊನ್ನಪ್ಪ, ಮತ್ತಿತರರು ಹಾಜರಿದ್ದರು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ