LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News Districts

ಪ್ರತಿಷ್ಠಿತ ಮಾತೃಭೂಮಿ ರಾಜ್ಯ ಪ್ರಶಸ್ತಿಗೆ ಮಹ್ಮದ್ ಆಸೀಫ್ ಆಯ್ಕೆ

ಕೊಪ್ಪಳ: ಕರ್ನಾಟಕ ಕಂಡ ಅದ್ಭುತ ಮತ್ತು ರಾಷ್ಟ್ರಮಟ್ಟದ ಖ್ಯಾತಿ ಗಳಿಸಿರುವ ಬೆಂಗಳೂರಿನ ಲಗ್ಗೆರೆಯ ಮಾತೃಭೂಮಿ ಯುವಕರ ಸಂಘ ತನ್ನ ಬೆಳ್ಳಿ ಮಹೋತ್ಸವದ ಅಂಗವಾಗಿ ಬೆಂಗಳೂರಿನಲ್ಲಿ ಹಮ್ಮಿಕೊಂಡಿರುವ ರಾಷ್ಟ್ರಮಟ್ಡದ ಕಾರ್ಯಕ್ರಮದಲ್ಲಿ ಗಂಗಾವತಿಯ ಯುವ ನಾಯಕ, ಕಾಂಗ್ರೆಸ್ ಪಕ್ಷದ ರಾಜ್ಯ ಯುವ ಕಾರ್ಯದರ್ಶಿ ಮಹಮ್ಮದ್ ಆಸೀಫ್ ಹುಸೇನ್ ಅವರಿಗೆ ಮಾತೃಭೂಮಿ ರಾಜ್ಯ ಪ್ರಶಸ್ತಿಯನ್ನು ಸಮಾಜ ಸೇವಾ ಕ್ಷೇತ್ರದ ವಿಭಾಗದಿಂದ ಆಯ್ಕೆ ಮಾಡಲಾಗಿದೆ ಎಂದು ಸಂಘದ ಸಂಸ್ಥಾಪಕ ಅಧ್ಯಕ್ಷ ಡಾ. ಎಸ್‌ ಬಾಲಾಜಿ ತಿಳಿಸಿದ್ದಾರೆ.



ಮಾತೃಭೂಮಿ ಯುವಕ ಸಂಘವು ಸುಮಾರು 30 ವರ್ಷಗಳಿಂದ ಸಾಂಸ್ಕೃತಿಕ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಅದರ ಬೆಳ್ಳಿ ಹಬ್ಬದ ಅಂಗವಾಗಿ ವಿಶೇಷ ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿದೆ. ಈ ಸಂಘವು 2007-08 ರಲ್ಲಿ ಭಾರತ ಸರ್ಕಾರದ ಅತ್ಯುತ್ತಮ ಸಾಂಘಿಕ ಪ್ರಶಸ್ತಿಯನ್ನು, ಕರ್ನಾಟಕ ಸರ್ಕಾರದ ರಾಜ್ಯ ಯುವ ಸಾಂಘಿಕ ಪ್ರಶಸ್ತಿಯನ್ನು ಪಡೆದಿದ್ದು, ಈ ಸಂಘದ ವತಿಯಿಂದ 30 ವರ್ಷಗಳ ಕಾಲ ಸಾಧಕರನ್ನು ಗುರುತಿಸಿ ಪ್ರೋತ್ಸಾಹಿಸುವ ಕಾರ್ಯ ನಡೆಯುತ್ತಿದೆ, ಈ ಸಾಲಿನಲ್ಲಿ ಬೆಳ್ಳಿ ಹಬ್ಬವಾದ್ದರಿಂದ 30ನೇ ವರ್ಷದ ವಾರ್ಷಿಕೋತ್ಸವ ಹಾಗೂ ಮೂವತ್ತರ ಸಂಭ್ರಮವನ್ನು 20 ಸಾಧಕರನ್ನು 02 ಸಾಂಘಿಕ ಪ್ರಶಸ್ತಿ ಸೇರಿ ಒಟ್ಟು 30 ಸಾಧಕರಿಗೆ ಮಾತೃಭೂಮಿ ಪ್ರಶಸ್ತಿಗಳನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಹರ್ಷ ಅಂತರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ 13.09.2025, ಶನಿವಾರ ಬೆಳಗ್ಗೆ 10 ಗಂಟೆಗೆ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಏರ್ಪಡಿಸಲಾಗಿದೆ. ಸಮಾಜದಲ್ಲಿ ಬಡವರ ಪರ, ಯುವಜನರ ಪರ ಹಾಗೂ ಶೋಷಿಥ ಪರವಾಗಿ ಮಾಡಿದ ಅಮೂಲ್ಯ ಸೇವೆಯನ್ನು ಗುರುತಿಸಿ ಮಾತೃಭೂಮಿ ರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು ಅನೇಕ ಗಣ್ಯರ, ಸ್ವಾಮೀಜಿಯವರ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ