
ಬಳ್ಳಾರಿ ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ಪ್ರಶಾಂತ್ ಕುಮಾರ್ ಮಿಶ್ರಾ ಅವರನ್ನು ಬೇರೆಡೆಗೆ ವರ್ಗಾಯಿಸಲಾಗಿದ್ದು, ಅವರ ಸ್ಥಳಕ್ಕೆ ಬೆಂಗಳೂರಿನ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜಂಟಿ ಕಾರ್ಯದರ್ಶಿಯಾಗಿದ್ದ ನಾಗೇಂದ್ರ ಪ್ರಸಾದ್ ಕೆ ಅವರನ್ನು ವರ್ಗಾವಣೆ ಮಾಡಿ ಆದೇಶಿಸಲಾಗಿದೆ.

ಅದೇ ರೀತಿ ವಿಜಯನಗರ ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ಎಂ.ಎಸ್.ದಿವಾಕರ್ ಅವರನ್ನು ಬೇರೆ ಇಲಾಖೆಗೆ ವರ್ಗಾವಣೆ ಮಾಡಲಾಗಿದ್ದು ಅವರ ಸ್ಥಳಕ್ಕೆ ಕವಿತ ಎಸ್ ಮನ್ನಿಕೇರಿ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.