LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News Districts

ರಾಷ್ಟ್ರೀಯ ಅಂಗಾಂಗ ದಾನ 2025

ಇ.ಎಸ್.ಐ.ಸಿ ವೈದ್ಯಕೀಯ ಕಾಲೇಜು ಹಾಗೂ ಮಾದರಿ ಆಸ್ಪತ್ರೆಯಲ್ಲಿ ಜಾಗೃತಿ ಹೆಜ್ಜೆ

ಬೆಂಗಳೂರು :  ರಾಜಾಜಿ ನಗರದ ಇ.ಎಸ್.ಐ.ಸಿ ವೈದ್ಯಕೀಯ ಕಾಲೇಜು ಮತ್ತು ಮಾದರಿ ಆಸ್ಪತ್ರೆಯಲ್ಲಿಂದು “ರಾಷ್ಟ್ರೀಯ ಅಂಗಾಂಗ ದಾನ 2025” ಅಭಿಯಾನದ ಅಂಗವಾಗಿ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ವೈದ್ಯಕೀಯ ವಿದ್ಯಾರ್ಥಿಗಳಿಂದ ಜಾಗೃತಿ ನಡಿಗೆ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.  “ನೀನು ಹೋದ ಮೇಲೆ ನಿನ್ನ ಜೀವ ಇನ್ನು ಕೆಲವರಲ್ಲಿ ಮುಂದುವರಿಯಲಿ” ಎಂಬ ಘೋಷಣೆಗಳು ಮತ್ತು ಅರಿವು ಮೂಡಿಸುವ ಫಲಕಗಳೊಂದಿಗೆ ವಿದ್ಯಾರ್ಥಿಗಳು, ಅಧ್ಯಾಪಕರು ಮತ್ತು ಸಿಬ್ಬಂದಿ ಆಸ್ಪತ್ರೆಯ ಆವರಣದಲ್ಲಿ ಜಾಥ ನಡೆಸಿದರು.



ನಂತರ, ವೈದ್ಯಕೀಯ ವಿದ್ಯಾರ್ಥಿಗಳು ನಾಟಕದ ಮೂಲಕ ಅಂಗಾಂಗ ದಾನದ ಮಾನವೀಯ ಮುಖ, ಅವಶ್ಯಕತೆ ಮತ್ತು ಸಮಾಜದಲ್ಲಿ ಅದರ ಬದಲಾವಣೆಯ ಶಕ್ತಿ ಕುರಿತು ಪ್ರಭಾವಶಾಲಿ ನಾಟಕವನ್ನು ಪ್ರದರ್ಶಿಸಿದರು.

ಆಸ್ಪತ್ರೆಗೆ ಆಗಮಿಸಿದ ರೋಗಿಗಳು ಹಾಗೂ ಅವರ ಸಂಬಂಧಿಕರಿಗೆ  ಅಂಗಾಂಗ ದಾನದ ಅರಿವು ಮೂಡಿಸಲಾಯಿತು. ವೈದ್ಯರು ಹಾಗೂ ವಿದ್ಯಾರ್ಥಿಗಳು ಅವರನ್ನು ಭೇಟಿ ನೀಡಿ, ಈ ದಾನದ ಸರಳ ಪ್ರಕ್ರಿಯೆ, ಪವಿತ್ರತೆ ಮತ್ತು ಅವಶ್ಯಕತೆಯನ್ನು ವಿವರಿಸಿದರು.

ಪ್ರತಿವರ್ಷ ಭಾರತದಲ್ಲಿ 5 ಲಕ್ಷಕ್ಕಿಂತ ಹೆಚ್ಚು ಜನರು ಅಗತ್ಯ ಅಂಗಾಂಗ ಸಿಗದೆ ಸಾವನ್ನಪ್ಪುತ್ತಿದ್ದಾರೆ. ಒಬ್ಬ ದಾನಿಯಿಂದ 8 ಜನರ ಜೀವ ಉಳಿಸಲು ಸಾಧ್ಯವಿದೆ. ಕಾರ್ಯಕ್ರಮದ ಕೊನೆಯಲ್ಲಿ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳು ಅಂಗಾಂಗ ದಾನದ ಶಪಥ ಮಾಡಿದರು. “ಅಂಗಾಂಗ ದಾನವೇ ನಿಜವಾದ ಜೀವದಾನ” ಎಂಬ ಸಂದೇಶದಿಂದ ದಿನದ ಕಾರ್ಯಕ್ರಮ ಸಮಾಪ್ತಿಯಾಯಿತು.

ಕಾರ್ಯಕ್ರಮದಲ್ಲಿ ಅಂಗರಚನಾ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಸೀಮಾ ಎಸ್.ಆರ್, ವಿಧಿವಿಜ್ಞಾನ ಔಷಧ ಮತ್ತು ವಿಷಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ವಿನಯ್ ಶೆಟ್ಟಿ, ಶಸ್ತ್ರ ಚಿಕಿತ್ಸಕ ಡಾ. ಅರುಣ್ ಕುಮಾರ್, ಡಾ. ಗಿರೀಶ್, ಡಾ. ಮಲ್ಲಿಕಾರ್ಜುನ ಅಡಿಬಟ್ಟಿ , ಡಾ. ಅಲಗಿರಿ, ಡಾ. ಕಮಲಾ, ಡಾ. ಶ್ಯಾಮಲಾ, ಡಾ. ಚಿತ್ರಾ, ಡಾ. ಅರ್ಚನಾ ,ಡಾ. ಮ್ಯಾಥ್ಯೂಸ್, ಡಾ. ರಕ್ಷಿತ್, ಡಾ. ರಾಮೇಶ್, ಡಾ. ರಕ್ಷಿತ್ , ಡಾ. ದರ್ಶನ್ ಮತ್ತಿತರರು ಉಪಸ್ಥಿತರಿದ್ದರು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ