ಮುಖ್ಯಮಂತ್ರಿ ಸಿದ್ದರಾಮಯ್ಯ 1ಕೋಟಿ ಲೀಟರ್ ಗೆ ನಂದಿನಿ ಹಾಲಿನ ಮಾರಾಟವನ್ನು ಹೆಚ್ಚಳ ಮಾಡುತ್ತೇವೆಂದು ಒಂದು ಕಡೆ ಹೇಳಿದರೆ ಮತ್ತೊಂದು ಕಡೆ ಹಿಂಬಾಗಿಲಿನಿಂದ ಅನ್ಯ ರಾಜ್ಯದ ಹಾಲು ಹಾಗೂ ಉತ್ಪನ್ನಗಳನ್ನು ಮಾರಾಟ ಮಾಡಲು ಮುಂದಾಗಿರುವುದು ಹಾಗೂ ಅನವಶ್ಯಕ ಪೈಪೋಟಿಗೆ ಕಾರಣವಾಗಿರುವುದು ಇವರ ದ್ವಂದ್ವ ನೀತಿಗೆ ಹಿಡಿದ ಕನ್ನಡಿ ಯಾಗಿದೆ. ಇದರಿಂದಾಗಿ ರಾಜ್ಯದ ರೈತರಗಳು ಮುಂದಿನ ದಿವಸಗಳಲ್ಲಿ ರಾಜ್ಯದ ಬಡ ರೈತರು ತಾವು ಪ್ರತಿ ದಿವಸ ಉತ್ಪಾದಿಸುವ ಹಾಲಿನ ಸಮೇತ ಬೀದಿಗೆ ಬೀಳುವ ಪರಿಸ್ಥಿತಿಗೆ ತಳ್ಳುವುದರಲ್ಲಿ ಯಾವುದೇ ಅನುಮಾನವಿಲ್ಲ.

ಕೂಡಲೇ ಮೆಟ್ರೋ ಅಧಿಕಾರಿಗಳು ತಮ್ಮ ವ್ಯಾಪಾರಿ ಬುದ್ದಿಯನ್ನು ಬದಿಗೊತ್ತಿ ಕನ್ನಡಿಗರ ಹಾಗೂ ರಾಜ್ಯದ ರೈತರುಗಳ ಅಸ್ಮಿತೆಯನ್ನು ಪ್ರಶ್ನಿಸುವಂತಹ ಇಂತಹ ಕುಕೃತ್ಯಗಳಿಗೆ ಕೈ ಹಾಕಿದಲ್ಲಿ ಆಮ್ ಆದ್ಮಿ ಪಕ್ಷ ರಾಜ್ಯದ ರೈತರುಗಳ ಸಮೇತ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಅನಿಲ್ ನಾಚಪ್ಪ ಎಚ್ಚರಿಸಿದರು.