LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News Districts

ಪೊಲೀಸ್–ಸಾರ್ವಜನಿಕರ ಸಮನ್ವಯ ಸಭೆ: ಸುರಕ್ಷಿತ ಸಂಚಾರಕ್ಕೆ ಜಾಗೃತಿ

ಬಳ್ಳಾರಿ :  ನಗರದ ಗಾಂಧಿನಗರ ಪೊಲೀಸ್ ಠಾಣೆ ವತಿಯಿಂದ ಪೊಲೀಸ್ಸಾರ್ವಜನಿಕರ ಸಮನ್ವಯ ಸಭೆಯನ್ನು ಆಯೋಜಿಸಿ ಸಾರ್ವಜನಿಕರ ಸಮಸ್ಯೆಗಳು ಹಾಗೂ ಸ್ಥಳೀಯ ಕುಂದುಕೊರತೆಗಳ ಕುರಿತು ಚರ್ಚಿಸಲಾಯಿತು.

 

ಸಿದ್ಧಾರ್ಥ ಕಾಲೋನಿಯ ಎಸ್ಸಿ/ಎಸ್ಟಿ ಮುಖಂಡರನ್ನು ಆಹ್ವಾನಿಸಿ ನಡೆದ ಸಭೆಯಲ್ಲಿ ಪ್ರದೇಶದ ಮೂಲಭೂತ ಸೌಲಭ್ಯಗಳು, ಸಾರ್ವಜನಿಕ ಸುರಕ್ಷತೆ ಹಾಗೂ ಕಾನೂನು ಸುವ್ಯವಸ್ಥೆ ಸಂಬಂಧಿಸಿದ ವಿಷಯಗಳ ಬಗ್ಗೆ ಅಭಿಪ್ರಾಯ ವಿನಿಮಯ ನಡೆಯಿತು. ಸಾರ್ವಜನಿಕರು ತಮ್ಮ ಸಮಸ್ಯೆಗಳು ಹಾಗೂ ಬೇಡಿಕೆಗಳನ್ನು ಪೊಲೀಸ್ ಅಧಿಕಾರಿಗಳ ಗಮನಕ್ಕೆ ತಂದರು.

ಸಭೆಯಲ್ಲಿ ಮಾತನಾಡಿದ ಗಾಂಧಿನಗರ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ರವಿಚಂದ್ರ, ರಸ್ತೆ ಅಪಘಾತಗಳನ್ನು ತಡೆಗಟ್ಟಲು ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಎಂದು ತಿಳಿಸಿದರು. ಸುರಕ್ಷಿತ ವಾಹನ ಚಾಲನೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಸಂಚಾರ ನಿಯಮಗಳನ್ನು ಪಾಲಿಸುವ ಮೂಲಕ ಅಮೂಲ್ಯ ಜೀವಗಳನ್ನು ರಕ್ಷಿಸಬಹುದು ಎಂದು ಹೇಳಿದರು.

ಪೊಲೀಸ್ ಇಲಾಖೆ ಮತ್ತು ಸಾರ್ವಜನಿಕರ ನಡುವೆ ಉತ್ತಮ ಬಾಂಧವ್ಯ ಬೆಳೆಸುವ ಉದ್ದೇಶದಿಂದ ಇಂತಹ ಸಮನ್ವಯ ಸಭೆಗಳು ಅಗತ್ಯವಾಗಿದ್ದು, ಜನರು ಯಾವುದೇ ಸಮಸ್ಯೆಗಳಿದ್ದರೂ ನಿರ್ಭಯವಾಗಿ ಪೊಲೀಸ್ ಠಾಣೆಯನ್ನು ಸಂಪರ್ಕಿಸಬೇಕು ಎಂದು ಅವರು ಮನವಿ ಮಾಡಿದರು.

ಸಭೆಯಲ್ಲಿ ಸ್ಥಳೀಯ ಮುಖಂಡರು, ಸಾರ್ವಜನಿಕರು ಹಾಗೂ ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ