ಬಳ್ಳಾರಿ: ಬೆಂಗಳೂರಿನ ವಿದುಷಿ ಸ್ಮೃತಿ ಭಾಸ್ಕರ್ ಅವರಿಂದ ಮಾರ್ಚ್ 1 ರಂದು ಪ್ರಭಾತ ಸಂಗೀತ ಮತ್ತು ಸಂಗೀತ ಕಾರ್ಯಾಗಾರವನ್ನು ಪ್ರಸ್ತುತಪಡಿಸಲಾಗುತ್ತಿದೆ.
ಬಳ್ಳಾರಿ ಮ್ಯೂಸಿಕ್ ಕ್ಲಬ್ ಅಧ್ಯಕ್ಷ ಜಯಪ್ರಕಾಶ್ ಜೆ.ಗುಪ್ತ, ಕಾರ್ಯದರ್ಶಿ ಡಿ.ಸಂಧ್ಯಾರಾವ್ ಅವರು ಈ ಕುರಿತು ಪ್ರಕಟಣೆ ನೀಡಿದ್ದು, ಅಂದು ಭಾನುವಾರ ಬೆಳಿಗ್ಗೆ 8 ಗಂಟೆಗೆ ಇಲ್ಲಿನ ಡಾ.ರಾಜಕುಮಾರ್ ರಸ್ತೆಯಲ್ಲಿರುವ ಅಯ್ಯಪ್ಪ ದೇವಸ್ಥಾನದಲ್ಲಿ ಈ ಕಾರ್ಯಾಗಾರ ನಡೆಯಲಿದೆ.