ನಾಯಕನಹಟ್ಟಿ : ಹೋಬಳಿಯ ಎನ್.ದೇವರಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ವರವು ಗ್ರಾಮದ ಡಾ.ಪಿ.ಕಾಟಂಲಿ0ಗಯ್ಯ ತಳಕು ಬ್ಲಾಕ್ ಕಾಂಗ್ರೆಸ್ ಪದವಿದರರ ವಿಭಾಗದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ಕರ್ನಾಟಕ ಪ್ರದೇಶ ಕಾಂಗ್ರೆಸ್ ಪದವಿದಾರ ವಿಭಾಗದ ಅಧ್ಯಕ್ಷ ಎನ್.ನಟರಾಜ್ ಗೌಡ, ಅಭಿವೃದ್ಧಿ ಹರಿಕಾರರು ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರದ ಶಾಸಕ ಎನ್.ವೈ.ಗೋಪಾಲಕೃಷ್ಣನವರ ಆದೇಶದ ಮೇರೆಗೆ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಪದವಿದರ ವಿಭಾಗದ ಅಧ್ಯಕ್ಷ ಪ್ರಕಾಶ ರಾಮನಾಯ್ಕ ಇವರ ಆದೇಶದ ಮೇರೆಗೆ ತಳಕು ಬ್ಲಾಕ್ ಕಾಂಗ್ರೆಸ್ ಪದವಿದರ ವಿಭಾಗದ ಅಧ್ಯಕ್ಷರಾಗಿ ಡಾ.ಪಿ.ಕಾಟಂಲಿ0ಗಯ್ಯ ಇವರನ್ನು ಆಯ್ಕೆ ಮಾಡಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನೂತನ ತಳಕು ಬ್ಲಾಕ್ ಕಾಂಗ್ರೆಸ್ ಪದವಿದರ ವಿಭಾಗದ ಅಧ್ಯಕ್ಷರಾಗಿ ಆಯ್ಕೆಯಾದ ಡಾ.ಪಿ.ಕಾಟಂಲಿ0ಗಯ್ಯ ಮಾತನಾಡಿ ಮುಂಬರುವ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆಗೆ ಯಾರೆ ಕಾಂಗ್ರೆಸ್ ಅಭ್ಯರ್ಥಿಯಾದರು ಅವರ ಗೆಲುವಿಗೆ ಶ್ರಮಿಸುತ್ತೇನೆ ಎಂದು ಭರವಸೆ ನೀಡಿದರು.
ತಳಕು ಮತ್ತು ನಾಯಕನಹಟ್ಟಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ರೆಡ್ಡಿ, ನೇರಲಗುಂಟೆ ಬ್ಯಾಂಕ್ ಸೂರನಾಯಕ, ಜಿ.ತಿಪ್ಪೇಸ್ವಾಮಿ, ವರವು ಶಂಕರಮೂರ್ತಿ, ಟಿ.ಕಾಟಯ್ಯ, ತಳಕು ಮತ್ತು ನಾಯಕನಹಟ್ಟಿ ಹೋಬಳಿಯ ಕಾಂಗ್ರೆಸ್ ಮುಖಂಡರುಗಳು ಅಭಿನಂದನೆಯನ್ನು ಸಲ್ಲಿಸಿದ್ದಾರೆ.