5 ಸರಕಾರಿ ಪ್ರೌಢಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಸೌಲಭ್ಯ
ಒಂದು ಸ್ಮಾರ್ಟ್ ಕ್ಲಾಸ್: ಮತ್ತೊಂದು ಡಿಜಿಟಲ್ ಲೈಬ್ರರಿ
ಗ್ರಾಮೀಣ ಭಾಗದ ಪ್ರೌಢಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಸೌಲಭ್ಯ ನೀಡುವುದು ಯೋಜನೆ ಮೂಖ್ಯ ಉದ್ದೇಶ
ಕವಿತಾಳ: ಆಧುನಿಕ ಜಗತ್ತಿನಲ್ಲಿ ವಿದ್ಯಾರ್ಥಿಗಳಿಗೆ ಸ್ಮಾರ್ಟ್ ಕ್ಲಾಸ್ ಅತಿ ಅವಶ್ಯವಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿದೇರ್ಶಕ ಕೆ.ಡಿ ಬಡಿಗೇರ ಹೇಳಿದರು.
ಪಟ್ಟಣದ ಬಾಲಕಿಯ ಸರಕಾರಿ ಪ್ರೌಢಶಾಲೆಯ ಆವರಣದಲ್ಲಿ ರಾಷ್ಟೀಯ ಹೆದ್ದಾರಿ ಪ್ರಾಧಿಕಾರ, ಜಿ.ಆರ್ ಇನ್ ಫ್ರಾ ಸೋಷಿಯಲ್ ವೆಲ್ಫೇರ್ ಟ್ರಸ್ಟ್, ಸಾರ್ವಜನಿಕ ಶಿಕ್ಷಣ ಇಲಾಖೆ ರಾಯಚೂರು ಮತ್ತು ಬಾಲಕಿಯ ಪ್ರೌಢಶಾಲೆ ಸಂಯುಕ್ತಾಶ್ರಯಲ್ಲಿ ಹಮ್ಮಿಕೊಂಡಿದ್ದ ಐದು ಶಾಲೆಗಳಿಗೆ 3.6 ಲಕ್ಷ ಮೊತ್ತದ ಪ್ರೊಜೆಕ್ಟರ್ ಮತ್ತು ಸ್ಮಾರ್ಟ್ ಕ್ಲಾಸ್ ಸಾಮಗ್ರಿಗಳನ್ನು ವಿತರಿಸಿ ಮಾತನಾಡಿದರು.
ಸ್ಮಾರ್ಟ್ ಕ್ಲಾಸ್ಗಳು ಶಿಕ್ಷಕರು ಮತ್ತು ಮಕ್ಕಳ ಮೇಲಿನ ಹೊರೆಯನ್ನು ಕಡಿಮೆ ಮಾಡುವುದಲ್ಲದೆ ಮಕ್ಕಳು ಬಹುಬೇಗ ವಿಷಯಗಳನ್ನು ಗ್ರಹಿಸುತ್ತಾರೆ. ತರಗತಿಯ ಡಿಜಿಟಲ್ ಪರದೆಯತ್ತ ತಮ್ಮ ಮನಸ್ಸುನ್ನು ಕೇಂದ್ರೀಕರಿಸುವುದರಿಂದ ಪಠ್ಯದ ವಿಷಯದಲ್ಲಿ ಬಹು ಬೇಗನೆ ಮಕ್ಕಳ ಮನಸ್ಸಿನಲ್ಲಿ ಉಳಿಯುತ್ತವೆ. ಶಿಕ್ಷಕರು ಪಠ್ಯಕ್ಕೆ ಸಂಬಂಧಿಸಿದ ಯಾವುದೇ ವಿಷಯಗಳನ್ನು ಉದಾಹರಣೆ ಮೂಲಕ ತೋರಿಸುವುದರಿಂದ ವಿದ್ಯಾರ್ಥಿಗಳಲ್ಲಿ ಯಾವುದೇ ಗೊಂದಲಗಳಿರುವುದಿಲ್ಲ. ವಿದ್ಯಾರ್ಥಿಗಳು ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಂಡು ಉತ್ತಮ ಅಂಕ ಪಡೆದು ಶಾಲೆಗೆ ಹಾಗೂ ಪಾಲಕರಿಗೆ ಕೀರ್ತಿ ತರಬೇಕು ಎಂದರು.

ಪ್ರಾಜೆಕ್ಟ್ ಮ್ಯಾನೇಜರ್ ಮಾತನಾಡಿ ಲಕ್ಷ್ಮಿ ಕಾಂತ ಶಿಕ್ಷಕರು ಸ್ಮಾರ್ಟ್ ಬೋರ್ಡ ಬಳಸಿ ಸಮರ್ಥವಾಗಿ ಕಲಿಸುವ ಮೂಲಕ ಮಕ್ಕಳೂ ಡಿಜಿಟಲ್ ಸ್ಮಾರ್ಟ್ ಕ್ಲಾಸ್ಗಳು ಅಗತ್ಯ ಪಾತ್ರವಹಿಸುತ್ತದೆ ಎಂದರು.
ಈ ಸಂದರ್ಭದಲ್ಲಿ ಸಿರವಾರ ತಹಶೀಲ್ದಾರ್ ಅಶೋಕ ಕುಮಾರ ಪವಾರ್, ಲಿಂಗಸಗೂರು ತಹಶೀಲ್ದಾರ್ ಸತ್ಯಮ್ಮ, ಬಾಲಕಿಯರ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಸಿದ್ರಾಮಪ್ಪ, ಪಾಮನಕಲ್ಲೂರು ಪ್ರೌಢಶಾಲೆಯ ಮುಖ್ಯ ಶಿಕ್ಷಕ ಬಸವರಾಜ, ಚಿಕ್ಕಹೆಸರೂರು ಪ್ರೌಢಶಾಲೆಯ ಮುಖ್ಯ ಶಿಕ್ಷಕ ಶರಣುಗೌಡ, ಹಣಗಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಅಮರೇಶ, ಸಹ ಶಿಕ್ಷಕರಾದ ಪ್ರಾಣೇಶ, ಗಿರೀಶ ಅಂಗಡಿ, ಶಂಕ್ರಯ್ಯ ಸ್ವಾಮಿ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.