
ಹೀಗಾಗಿ ಮಳೆಯಲ್ಲಿ ಮಕ್ಕಳಿಗೆ ಶಾಲೆ ರಜೆ ಅನಿವಾರ್ಯ. ಬಿಸಿಯೂಟದ ದವಸ ಧಾನ್ಯಗಳು ನೀರು ಪಾಲಾಗುತ್ತವೆ. ಶಾಲಾ ಸಾಮಗ್ರಿಗಳು, ಮಹತ್ವದ ಶಾಲಾ ದಾಖಲೆಗಳು ಮಳೆಯಿಂದಾಗಿ ನಾಶಗೊಂಡಿವೆ.
ಶಾಲಾ ಕಟ್ಟಡ ನಿರ್ಮಾಣಕ್ಕಾಗಿ, ಶಾಲಾ ಕೊಠಡಿಗಳ ದುರಸ್ತಿಗಾಗಿ ಶಿಕ್ಷಣ ಇಲಾಖೆ, ಮತಕ್ಷೇತ್ರದ ಶಾಸಕರಿಗೆ ಸಾಕಷ್ಟು ಸಲ ಮನವಿ ಮಾಡಿಕೊಂಡಾಗಲೂ ಯಾವುದೇ ಕ್ರಮ ಕೈಗೊಂಡಿಲ್ಲ.

ಇನ್ನಾದರೂ ಎಚ್ಚೆತ್ತುಕೊಂಡು ಶಾಲಾ ಕೊಠಡಿಗಳ ನಿರ್ಮಾಣ, ದುರಸ್ತಿ ಆಗದಿದ್ದರೆ ಶಾಲಾ ಮಕ್ಕಳೊಂದಿಗೆ ಶಾಲಾ ಸುಧಾರಣಾ ಸಮಿತಿ ಸದಸ್ಯರು ಶಿಕ್ಷಣ ಇಲಾಖೆಯ ಕಾರ್ಯಾಲಯದ ಎದುರು ಉಗ್ರ ಪ್ರತಿಭಟನೆ ಕೈಗೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ಈಗಾಗಲೇ ಮನವಿ ಸಲ್ಲಿಸಲಾಗಿದೆ ಎಂದು ಸಮಿತಿ ಸದಸ್ಯರು ಎಚ್ಚರಿಕೆ ನೀಡಿದ್ದಾರೆ.

" ಇಲ್ಲಿ ಓದುವ ಬಹುತೇಕ ಮಕ್ಕಳು ಮಾದಿಗ ಜನಾಂಗದವರಾಗಿರುವ ಕಾರಣ ಎಲ್ಲಾ ಅಧಿಕಾರಿಗಳು ನಮ್ಮ ಮನವಿಗಳಿಗೂ ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಏನಾದರೂ ಅವಘಡ ಸಂಭವಿಸಿದರೆ ಎಲ್ಲರೂ ತಲೆದಂಡ ಕೊಡಬೇಕಾಗುತ್ತದೆ. ಹಾಗಾಗಿ ಮುಂಚೆಯೇ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಳ್ಳಲಿ."
ಮರಿಯಪ್ಪ , ಎಸ್.ಡಿ.ಎಂ.ಸಿ ಅಧ್ಯಕ್ಷ
"ಎರಡು ವರ್ಷಗಳಿಂದ ಹೊಸ ಶಾಲಾ ಕಟ್ಟಡ ನಿರ್ಮಾಣಕ್ಕೆ ಮನವಿಗಳನ್ನು ಸಲ್ಲಿಸಿ, ಕಾಲ ಕಾಲಕ್ಕೆ ಅಧಿಕಾರಿಗಳ ಗಮನಕ್ಕೆ ತಂದಿದ್ದೇವೆ. ನಿನ್ನೆ ಮತ್ತೆ ಮೇಲ್ಚಾವಣಿಯ ಸಿಮೆಂಟ್ ಕುಸಿದು ಬಿತ್ತು. ಕೂದಲೆಳೆಯಲ್ಲಿ ಅಪಾಯ ತಪ್ಪಿದೆ."
- ಹನುಮಂತ ರೆಡ್ಡಿ , ಮುಖ್ಯೋಪಾಧ್ಯಾಯ
" ಗಜಗಿನಹಾಳು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮೂರು ಕೊಠಡಿಗಳ ದುರಸ್ತಿಗೆ ಅನುದಾನ ದೊರೆತ ಕೂಡಲೆ ಕೊಠಡಿಗಳನ್ನು ದುರಸ್ತಿ ಮಾಡಲಾಗುವುದು."
ಹೆಚ್.ಗುರಪ್ಪ , ಬಿ.ಇ.ಓ, ಸಿರುಗುಪ್ಪ.