ಮರಿಯಮ್ಮನಹಳ್ಳಿ: ಪಟ್ಟಣ ಹತ್ತಿರದ ರಾಷ್ಟ್ರೀಯ ಹೆದ್ದಾರಿ50ರ ಡಣಾಪುರ ಬಳಿ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದ ಹಿನ್ನೆಲೆ ವಿಜಯನಗರ ಪೊಲೀಸ್ ವರಿಷ್ಠಾಧಿಕಾರಿ ಜಾಹ್ನವಿ ರವರು ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು. ಡಣಾಪುರ ಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಲವು ಅಪಘಾತಗಳು ಜರುಗಿ ಸಾವು, ನೋವು ಸಂಭವಿಸಿದ್ದವು. ಈ ಭಾಗದಲ್ಲಿ ರಸ್ತೆ ವಿಸ್ತರಣೆ ಹಾಗೂ ಅಂಡರ್ ಪಾಸ್ ಕಾಮಾಗಾರಿ ನಡೆಯುತ್ತಿದೆ. ಇದರಿಂದ ಒನ್ ವೇ ರಸ್ತೆಯಲ್ಲಿ ವಾಹಗಳು ಸಂಚರಿಸಿ ದಟ್ಟಣೆ ಉಂಟಾಗಿತ್ತು. ಸುರಕ್ಷಿತ ಸಂಚಾರ ಕೈಗೊಳ್ಳಲು ಹೆದ್ದಾರಿ ಅಧಿಕಾರಿಗಳು ಹಾಗೂ ಗುತ್ತಿಗೆ ದಾರರನ್ನು ಸ್ಥಳಕ್ಕೆ ಕರೆಯಿಸಿ ಸಲಹೆ ಸೂಚನೆಗಳನ್ನು ನೀಡಿದರು.
ಈ ಸಂದರ್ಭದಲ್ಲಿ ಕೂಡ್ಲಿಗಿ ಡಿವೈಎಸ್ಪಿ ಮಲ್ಲೇಶ ದೊಡ್ಡಮನಿ, ಸಿಪಿಐ ವಿಕಾಸ್ ಲಮಾಣಿ, ಪಿಎಸ್ಐ ತಾರಾಬಾಯಿ ಇದ್ದರು.