LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News Districts

ಮೊಬೈಲ್ ಹಾವಳಿಯಿಂದ ವಿದ್ಯಾರ್ಥಿಗಳಲ್ಲಿ ಓದು ಕ್ಷೀಣ - ಯಾಳ್ಪಿ ವಲಿಭಾಷ

ಕಂಪ್ಲಿ:  ಇಂದಿನ ಆಧುನಿಕ ಕಾಲದಲ್ಲಿ ಮೊಬೈಲ್ಹಾವಳಿಯಿಂದ ವಿದ್ಯಾರ್ಥಿಗಳಲ್ಲಿ ಓದುವ ಹವ್ಯಾಸ ಕಡಿಮೆಯಾಗಿದೆ. ಮೊಬೈಲ್ನಲ್ಲಿ ಹೆಚ್ಚಿನ ಸಮಯ ಕಳೆಯುತ್ತಿರುವ ವಿದ್ಯಾರ್ಥಿಗಳು, ತಮ್ಮ ಜೀವನವನ್ನೂ ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದು ಕರ್ನಾಟಕ ಪತ್ರಕರ್ತರ ಸಂಘದ ಬಳ್ಳಾರಿ ಜಿಲ್ಲಾಧ್ಯಕ್ಷ ಯಾಳ್ಪಿ ವಲಿಭಾಷ ಹೇಳಿದರು.

 

ಪಟ್ಟಣದ ಷಾಮಿಯಾಚಂದ್ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಏರ್ಪಡಿಸಿದ್ದ ಪತ್ರಿಕಾ ದಿನಾಚರಣೆಯ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಅವರು ಮಾತನಾಡಿದರು.

 

ವಿದ್ಯಾರ್ಥಿಗಳು ಮೊಬೈಲ್ ಬಿಟ್ಟು, ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಅಂದಾಗ ಮಾತ್ರ ಜೀವನದಲ್ಲಿ ಯಶಸ್ಸು ಸಾಧಿಸಬಹುದು. ವಿದ್ಯಾರ್ಥಿಗಳು ಜೀವನದಲ್ಲಿ ಉನ್ನತ ಗುರಿಯನ್ನು ಹೊಂದುವ ಸಂಕಲ್ಪ ಮಾಡಬೇಕು ಎಂದರು.

 

ಸಮಾಜ ಹಾಗೂ ದೇಶದ ಬಗ್ಗೆ ಕಾಳಜಿ ವಹಿಸುವ ಮನೋಭಾವ ಬೆಳೆಸಿಕೊಳ್ಳಬೇಕಾದರೆ, ಉತ್ತಮ ಚಿಂತನೆ ಮತ್ತು ವಿವೇಚನಾ ಶಕ್ತಿ ಅಗತ್ಯ. ಪ್ರತಿಯೊಂದು ವಿಷಯವನ್ನೂ ಮೌಲ್ಯಮಾಪನ ಮಾಡುವ ಗುಣವನ್ನು ವಿದ್ಯಾರ್ಥಿ ಜೀವನದಲ್ಲೇ ರೂಢಿಸಿಕೊಳ್ಳಬೇಕು ಅಲ್ಲದೇ, ಪತ್ರಿಕೆಗಳನ್ನು ಹೆಚ್ಚೆಚ್ಚು ಓದುವ ಹವ್ಯಾಸವನ್ನು ವಿಧ್ಯಾರ್ಥಿಗಳು ಬೆಳೆಸಿಕೊಳ್ಳಬೇಕು ಎಂದು ಅವರು ಹೇಳಿದರು.

 

ಜನಪ್ರತಿನಿಧಿಗಳ ಮಾತುಗಳು ವೇದಿಕೆಗೆ ಸೀಮಿತವಾಗಿ ಅದು ಕಾರ್ಯರೂಪಕ್ಕೆ ಬಾರದಿದ್ದಾಗ ಅದನ್ನು ನೆನಪು ಮಾಡುವ ಕಾರ್ಯವನ್ನು ಪತ್ರಕರ್ತರು ಮಾಡುವ ಮೂಲಕ ಅಂಕುಶವಾಗಿ ಕೆಲಸ ಮಾಡುತ್ತಾರೆ. ತಪ್ಪು-ಸರಿಗಳನ್ನು ಸಮಾಜಕ್ಕೆ ತಿಳಿಸುವ ಕಾರ್ಯ ಅತಿ ಅಗತ್ಯವಾಗಿದೆ.

 

ಪತ್ರಿಕೋದ್ಯಮದಲ್ಲಿ ಎಐ ಬಳಕೆ ಹೆಚ್ಚು ಪರಿಣಾಮಕಾರಿಯಾಗಲಿದ್ದುಅದರ ಟೂಲ್ ಗಳನ್ನು ಬಳಸಿಕೊಂಡು ಲೇಖನಗಳನ್ನು ಹೆಚ್ಚು ಸ್ಪಷ್ಟಗೊಳಿಸುವ ಜತೆಗೆ ತಪ್ಪುಗಳನ್ನು ದೂರ ಮಾಡಬಹುದು. ನಮ್ಮ ಅನುಭವ, ಸೃಜನಶೀಲತೆಗಳ ಮೂಲಕ ಲೇಖನಗಳಿಗೆ ಶಕ್ತಿ ತುಂಬುವ ಕಾರ್ಯ ಮಾಡಬಹುದು ಎಂದರು.

 

ಕಾರ್ಯಕ್ರಮ ನಿರೂಪಣೆಯನ್ನ ಕರ್ನಾಟಕ ಪತ್ರಕರ್ತರ ಸಂಘದ ಕಂಪ್ಲಿ ತಾಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಹೆಚ್.ಮರಿಯಪ್ಪ ಮಾಡಿದರು. ಪ್ರಾಸ್ತಾವಿಕವಾಗಿ ಕರ್ನಾಟಕ ಪತ್ರಕರ್ತರ ಸಂಘದ ಜಿಲ್ಲಾ ಉಪಾಧ್ಯಕ್ಷ ಡಾ.ಗಿರೀಶ್ ಕುಮಾರ್ ಗೌಡ ರವರು ಮಾತನಾಡಿದರು.

 

ಸಂದರ್ಭದಲ್ಲಿ ಕರ್ನಾಟಕ ಪತ್ರಕರ್ತರ ಸಂಘದ ಜಿಲ್ಲಾ ಉಪಾಧ್ಯಕ್ಷರಾದ ಕೆ.ಬಜಾರಪ್ಪ, ಕುರುಗೋಡು ವೀರಭಧ್ರಗೌಡ, ಗಿರೀಶ್ ಕುಮಾರ್ ಗೌಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದುರ್ಗೇಶ್ ಯಾದವ್, ವೀರಶೈವ ಲಿಂಗಾಯತ ಮಹಾ ವೇದಿಕೆಯ ಜಿಲ್ಲಾಧ್ಯಕ್ಷರಾದ ಹೊಸಕೋಟೆ ಜಗದೀಶ್, ಕಾಲೇಜಿನ ಪ್ರಾಂಶುಪಾಲರಾದ ಸಿದ್ದಣ್ಣ ಪರಮೇಶ್ವರ, ತಾಲೂಕ ಪಂಚಾಯತ್ ಇಓ ಆರ್.ಕೆ.ಶ್ರೀಕುಮಾರ್, ದಲಿತ ಮುಖಂಡ ಕೆ.ಲಕ್ಷ್ಮಣ, ಹಿರಿಯ ಪತ್ರಕರ್ತರಾದ ಭಾವೈಕ್ಯ ವೆಂಕಟೇಶ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ