ವೀರಶೈವ ಸಮಾಜದ ದೊಡ್ಡ ಆಸ್ತಿ ಆಗಿದ್ದ ಎನ್. ತಿಪ್ಪಣ್ಣ ಅವರು, ಯುವ ವಕೀಲರಿಗೆ ಮಾರ್ಗದರ್ಶಕರಾಗಿ, ವೃತ್ತಿಯಲ್ಲಿ ಆದರ್ಶ - ವೃತ್ತಿಪರತೆ ಮತ್ತು ಬದ್ಧತೆಗಳನ್ನು ಹೊಂದುವ ಕುರಿತು ಸದಾಕಾಲ ಆದರ್ಶರಾಗಿದ್ದರು.
ಬಳ್ಳಾರಿ ವೀರಶೈವ ವಿದ್ಯಾವರ್ಧಕ ಸಂಘದ ಸರ್ವಾಂಗೀಣ ಅಭಿವೃದ್ಧಿಗಾಗಿ ಶ್ರಮಿಸಿದ್ದ ಎನ್. ತಿಪ್ಪಣ್ಣ ಅವರ ಪಾರ್ಥಿವ ಶರೀರದ ದರ್ಶನಕ್ಕಾಗಿ ಬಳ್ಳಾರಿಯ ಸುಕೃತ ನರ್ಸಿಂಗ್ ಪಕ್ಕದ ಮನೆಯಲ್ಲಿ ಶನಿವಾರ ನಸುಕಿನ 6 ಗಂಟೆಯವರೆಗೆ ವ್ಯವಸ್ಥೆ ಮಾಡಲಾಗಿದೆ.

ಮೃತರ ಅಂತಿಮ ಸಂಸ್ಕಾರವು ವೀರಶೈವ ವಿಧಿ ಸಂಪ್ರದಾಯಗಳ ಪ್ರಕಾರ ಅವರ ಹುಟ್ಟೂರಾದ ಚಿತ್ರದುರ್ಗ ಜಿಲ್ಲೆಯ ತುರುವನೂರಲ್ಲಿ ಶನಿವಾರ ಮಧ್ಯಾಹ್ನ 12 ಗಂಟೆಗೆ ನಡೆಸಲಾಗುತ್ತದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.