ಅಲ್ಲಿ ನೆರೆದಿದ್ದ ಸಾವಿರಾರು ರೈತರುಗಳು ತಮ್ಮ ವಂಶಾನುಗತ ಕೃಷಿ ಭೂಮಿಯ ಹಕ್ಕಿಗಾಗಿ ಕಳೆದ ಸಾವಿರ ದಿವಸಗಳಿಂದ ಹೋರಾಟ ನಡೆಸುತ್ತಿದ್ದಾರೆ. ಮಹಿಳೆಯರು ವೃದ್ಧರು ಎಂಬುದನ್ನು ಸಹ ಪರಿಗಣಿಸದೆ ಪೊಲೀಸರು ಬಂಧನದ ವೇಳೆಯಲ್ಲಿ ನಡೆಸಿದ ದೌರ್ಜನ್ಯ ಯಾವುದೇ ನಾಗರೀಕ ಸಮಾಜ ತಲೆತಗ್ಗಿಸುವಂಥದ್ದು. ಈ ಹಿಂದೆ ಯಡಿಯೂರಪ್ಪನವರಿಗೆ ರಾಜ್ಯದ ಜನ ತಕ್ಕ ಪಾಠ ಕಲಿಸಿದ್ದಾರೆ. ಈಗ ಸಿದ್ದರಾಮಯ್ಯನವರಿಗೊ ಸಹ ರಾಜ್ಯದ ಜನ ತಕ್ಕಪಾಠ ಕಲಿಸುವ ಕಾಲ ಸನ್ಹಿತವಾಗಿದೆ. ಈ ಘಟನೆಗೆ ಸರ್ಕಾರ ಉತ್ತರದಾಯಿತ್ವವಾಗಿರುತ್ತದೆ.

ರಾಜ್ಯದಲ್ಲಿ ತಮ್ಮ ಹಕ್ಕುಗಳಿಗಾಗಿ ಹೋರಾಟ ನಡೆಸುವ ಎಲ್ಲ ರೈತಾಪಿ ವರ್ಗಗಳ ಮೇಲೆ ಈ ರೀತಿಯ ದೌರ್ಜನ್ಯವನ್ನು ಪಕ್ಷವು ಖಂಡಿಸುತ್ತದೆ ಮತ್ತು ಅವರ ಹೋರಾಟದಲ್ಲಿ ಸದಾಕಾಲ ನಿಲ್ಲುತ್ತದೆ ಎಂದು ಮುಖ್ಯಮಂತ್ರಿ ಚಂದ್ರು ತಿಳಿಸಿದರು.