ಎಪಿಎಸ್ ಇಂಜಿನಿಯರಿಂಗ್ ಕಾಲೇಜಿನ ಡಿ.ಆರ್.ಡಿ.ಒ ಪ್ರಾಜೆಕ್ಟ್, ಮಾನವರ ಬದಲು ಯುದ್ಧಭೂಮಿಯಲ್ಲಿ ಸೇವೆ ಸಲ್ಲಿಸಲು ರೂಪುಗೊಂಡ ರೋಬೋಟ್ಸ್ ಗಮನ ಸೆಳೆಯಿತು. ಇದು ಮೌಲ್ಯಯುತ ಜೀವ ಉಳಿಸುವ ರಕ್ಷಣಾ ಇಲಾಖೆಯ ಮಹತ್ವದ ಕಾರ್ಯಕ್ರಮವಾಗಿದೆ. ಥಿಂಕ್ ಟ್ಯಾಂಕ್ ಸಾರ್ವಜನಿಕರು ಮತ್ತು ಪೋಷಕರಿಗೆ ಮುಕ್ತವಾಗಿತ್ತು. ಇದಕ್ಕೆ ಉತ್ತಮ ಪ್ರತಿಕ್ರಿಯೆ ದೊರೆಯಿತು.

ಶಾಸಕ ರವಿ ಸುಬ್ರಮಣ್ಯ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಕುತೂಹಲ, ಸೃಜನಶೀಲತೆ ಇರಬೇಕು. ಈ ಕಾರ್ಯಕ್ರಮ ವಿದ್ಯಾರ್ಥಿಗಳಿಗೆ ತಮ್ಮ ಕಲ್ಪನೆಗಳನ್ನು ಪ್ರಾಯೋಗಿಕ, ಪರಿಣಾಮಕಾರಿಯಾಗಿ ಪರಿವರ್ತಿಸಲು ಸಹಕಾರಿಯಾಗಲಿದೆ. ಬಾಲ್ಯದಲ್ಲಿ ನಾವೀನ್ಯತೆಯನ್ನು ಬೆಳೆಸುವ ಅಗತ್ಯವಿದೆ ಎಂದರು.
ಎಪಿಎಸ್ಇಟಿ ಅಧ್ಯಕ್ಷ ಡಾ. ವಿಷ್ಣು ಭರತ್ ಅಲಂಪಲ್ಲಿ ಮಾತನಾಡಿ, ಈ ಕಾರ್ಯಕ್ರಮ ಸಾಂಪ್ರದಾಯಿಕ ತರಗತಿಗಳನ್ನು ಮೀರಿದ ಕಲಿಕೆಯನ್ನು ಮುಂದುವರೆಸಲು ಸಹಕಾರಿಯಾಗಲಿದೆ. ಕೈಗೆಟಕುವ ಯೋಜನೆಗಳ ಮೂಲಕ ಸೃಜನಾತ್ಮಕ ಚಿಂತನೆ, ಸಮಸ್ಯೆ, ಪರಿಹಾರ ಮತ್ತು ಕಲ್ಪನೆಗೆ ಪ್ರೋತ್ಸಾಹ ನೀಡುತ್ತಿದೆ. ವಿದ್ಯಾರ್ಥಿಗಳು ಆತ್ಮವಿಶ್ವಾಸ, ನಾವೀನ್ಯಕರ ಮತ್ತು ಸಮಸ್ಯೆ ಪರಿಹಾರಮುಖಿ ವ್ಯಕ್ತಿಗಳಾಗಿ ಬೆಳೆಯಲು ಸಹಕಾರಿಯಾಗಲಿದೆ ಎಂದರು.
ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಎ. ಪ್ರಕಾಶ್ ಮತ್ತಿತರರು ಉಪಸ್ಥಿತರಿದ್ದರು.