LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News Districts

ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿ: ಎರಡು ಪ್ರಕರಣಗಳ ತನಿಖೆಗೆ ನಿವೃತ್ತ ನ್ಯಾಯಾಧೀಶರ ನೇಮಕ

ಬಳ್ಳಾರಿ : ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ಕಾನೂನು ಬಾಹಿರವಾಗಿ ನಡೆದ ಎರಡು ಪ್ರಕರಣಗಳ ಕುರಿತು ತನಿಖೆಗೆ ಬೆಳಗಾವಿ ಜಿಲ್ಲಾ ಸತ್ರ ನ್ಯಾಯಾಲಯದ ನಿವೃತ್ತ ಜಿಲ್ಲಾ ನ್ಯಾಯಾಧೀಶರಾದ ಡಿ.ಎಸ್.ಶಿಂಧೆ ಅವರನ್ನು ತನಿಖಾಧಿಕಾರಿಯಾಗಿ ನೇಮಿಸಿ ಆದೇಶ ಜಾರಿಗೊಳಿಸಲಾಗಿದೆ ಎಂದು ವಿವಿಯ ಕುಲಪತಿ ಪ್ರೊ.ಎಂ.ಮುನಿರಾಜು ಅವರು ತಿಳಿಸಿದ್ದಾರೆ.

ವಿವಿಯ ಪರೀಕ್ಷಾ ವಿಭಾಗದಲ್ಲಿ ಜರುಗಿದ ಕಾನೂನುಬಾಹಿರ ಘಟಿಕೋತ್ಸವ ಪ್ರಮಾಣ ಪತ್ರ ವಿತರಣೆ ಪ್ರಕರಣ ಮತ್ತು ವಿವಿಯ ಇತಿಹಾಸ, ಪುರಾತತ್ವ ಅಧ್ಯಯನ ವಿಭಾಗದ ಸಹ ಪ್ರಾಧ್ಯಾಪಕ ಡಾ.ಅನಂತ್ ಎಲ್ ಝಂಡೇಕರ್ ಇವರು ವಿಶ್ವವಿದ್ಯಾಲಯದಲ್ಲಿನ ಸಹ ಪ್ರಾಧ್ಯಾಪಕ ಹುದ್ದೆಯ ನೇಮಕಾತಿ ಮತ್ತು ಪ್ರಭಾರ ಕುಲಪತಿಗಳಾಗಿ ಸೇವೆ ಸಲ್ಲಿಸಿದ ಅವಧಿಯಲ್ಲಿನ ಕೆಲ ಕಾನೂನುಬಾಹಿರ ಆದೇಶಗಳ ಕುರಿತಂತೆ ಕುಲಾಧಿಪತಿಗಳ ಕಚೇರಿಯಲ್ಲಿ ದಾಖಲಾದ ಸಾರ್ವಜನಿಕ ಹಿತಾಸಕ್ತಿ ದೂರಿನ ಪ್ರಕರಣಗಳ ಕುರಿತಂತೆ ಇತ್ತೀಚೆಗೆ ಜರುಗಿದ ವಿಶ್ವವಿದ್ಯಾಲಯದ ಸಿಂಡಿಕೇಟ್ ಸಭೆಯಲ್ಲಿ ವಿಷಯ ಮಂಡಿಸಲಾಗಿದ್ದು, ಸಭೆಯು ವಿಸ್ತೃತವಾಗಿ ಚರ್ಚಿಸಿ ಈ ಪ್ರಕರಣಗಳ ಕುರಿತಂತೆ ಓರ್ವ ನಿವೃತ್ತ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆ ನಡೆಸಲು ತೀರ್ಮಾನಿಸಲಾಗಿದೆ.



ಹಾಗಾಗಿ ಎರಡೂ ಪ್ರಕರಣಗಳ ಕುರಿತು ತನಿಖೆಗೆ ಬೆಳಗಾವಿ ಜಿಲ್ಲಾ ಸತ್ರ ನ್ಯಾಯಾಲಯದ ನಿವೃತ್ತ ಜಿಲ್ಲಾ ನ್ಯಾಯಾಧೀಶರಾದ ಡಿ.ಎಸ್.ಶಿಂಧೆ ಅವರನ್ನು ತನಿಖಾಧಿಕಾರಿಯಾಗಿ ನೇಮಿಸಿ ಆದೇಶ ಜಾರಿಗೊಳಿಸಲಾಗಿದ್ದು, ಇವರು ಪ್ರಕರಣ ಕುರಿತು 45 ದಿನಗಳ ಒಳಗಾಗಿ ತನಿಖೆ ಕೈಗೊಂಡು ವಿಶ್ವವಿದ್ಯಾಲಯಕ್ಕೆ ವರದಿ ಸಲ್ಲಿಸಲು ಸೂಚಿಸಲಾಗಿದೆ.

ತನಿಖಾ ವರದಿಗಳು ವಿಶ್ವವಿದ್ಯಾಲಯಕ್ಕೆ ಸಲ್ಲಿಕೆಯಾದ ನಂತರ ತಪ್ಪಿತಸ್ಥರ ವಿರುದ್ಧ ಮುಂದಿನ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ವಿಶ್ವವಿದ್ಯಾಲಯದ ಕುಲಪತಿಯವರು ಹಾಗೂ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ